10:46 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಡಾ.ಬಿ. ಯಶೋವರ್ಮ ಅಂತಿಮ ದರ್ಶನ: ಉಜಿರೆಯಲ್ಲಿ ಅಂಗಡಿ ಮುಗ್ಗಟ್ಟು ಬಂದ್

24/05/2022, 11:15

ಬೆಳ್ತಂಗಡಿ(reporterkarnataka.com): ಉಜಿರೆ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ. ಯಶೋವರ್ಮ ಅವರ ಪಾರ್ಥಿವ ಶರೀರವನ್ನು ಉಜಿರೆ ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಮೃತರ ಗೌರವಾರ್ಥವಾಗಿ ಉಜಿರೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶೋಕ ಆಚರಿಸಲಾಗುವುದು.

ಯಶೋವರ್ಮ ಅವರ ಪಾರ್ಥೀವ ಶರೀರವನ್ನು ಇಂದು ಉಜಿರೆ ವೃತ್ತದಿಂದ ಎಸ್‌ಡಿಎಂ ಕಾಲೇಜ್‌ವರೆಗೆ ಅಭಿಮಾನಿಗಳ ಪಾದಯಾತ್ರೆಯ ಮೆರವಣಿಗೆಯಲ್ಲಿ ಕರೆತಂದು ಅಂತಿಮ ದರ್ಶನಕ್ಕೆ 

ಉಜಿರೆ ಕಾಲೇಜಿನಲ್ಲಿ ಮಧ್ಯಾಹ್ನ 2ರಿಂದ ಸಂಜೆ 5.30 ರವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಹಾಗೆಯೇ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಇಂದು ಸಂಜೆ 7 ಗಂಟೆಯವರೆಗೆ ಉಜಿರೆ ಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ಥಗಿತಗೊಳಿಸುವುದಾಗಿ ವರ್ತಕ ಸಂಘದ ಅಧ್ಯಕ್ಷ ಅರವಿಂದ್ ಕಾರಂತ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಬಳಿಕ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಎಲ್ಲಾ ಶಾಲಾ ಕಾಲೇಜುಗಳಿಗೆ ನಿನ್ನೆ ರಜೆ ನೀಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು