1:52 AM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ

22/05/2024, 14:39

ಮಂಗಳೂರು(reporterkarnataka.com): ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರ ಅವರಿಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಾಡಲಾಯಿತು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಪ್ರದಾನ ಮಾಡಿದರು.
ವೈದ್ಯರಾದಿಯಾಗಿ ಪ್ರತಿಯೊಬ್ಬರು ಜೀವನದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ನಟನೆ ಮಾಡುತ್ತಲೇ ಚಿಕಿತ್ಸೆಯನ್ನು ನೀಡಬೇಕಾಗುತ್ತದೆ ಎಂದು ಅಭಿನಯ ತರಬೇತಿಯ ಪ್ರಾಧಾನ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಮಕ್ಕಳ ನಟನೆಯಿಂದ ಮಕ್ಕಳಿಗೂ, ಹೆತ್ತವರಿಗೂ ಖುಷಿ, ಆಕರ್ಷಣೆ ಹೆಚ್ಚಲಿದೆ ಎಂದು ಮೋಹನ ಆಳ್ವ ಹೇಳಿದರು.
ಆಳ್ವಾಸ್ ಫೌಂಡೇಶನ್ ನ ಟ್ರಸ್ಟಿ ವಿವೇಕ ಆಳ್ವ, ರಂಗ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಸಂಪನ್ಮೂಲ ವ್ಯಕ್ತಿ ರಂಗ ನಿರ್ದೇಶಕಿ ಗಿರಿಜಾ ಸಿದ್ದಿ, ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಯೋಗೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉದ್ಘಾಟನಾ ಸಂದರ್ಭದಲ್ಲಿ ರಿಷಿಕಾ ಕುಂದೇಶ್ವರ ಹರಿಕಥೆ, ಉದ್ಘಾಟನಾ ರಂಗಗೀತೆ ಹಾಗೂ ವೈದೇ ಹಿಯವರ ನಾಯಿಮರಿ ನಾಟಕದ ತುಣುಕು ಪ್ರದರ್ಶಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು