3:33 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ

22/05/2024, 14:39

ಮಂಗಳೂರು(reporterkarnataka.com): ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರ ಅವರಿಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಾಡಲಾಯಿತು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಪ್ರದಾನ ಮಾಡಿದರು.
ವೈದ್ಯರಾದಿಯಾಗಿ ಪ್ರತಿಯೊಬ್ಬರು ಜೀವನದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ನಟನೆ ಮಾಡುತ್ತಲೇ ಚಿಕಿತ್ಸೆಯನ್ನು ನೀಡಬೇಕಾಗುತ್ತದೆ ಎಂದು ಅಭಿನಯ ತರಬೇತಿಯ ಪ್ರಾಧಾನ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಮಕ್ಕಳ ನಟನೆಯಿಂದ ಮಕ್ಕಳಿಗೂ, ಹೆತ್ತವರಿಗೂ ಖುಷಿ, ಆಕರ್ಷಣೆ ಹೆಚ್ಚಲಿದೆ ಎಂದು ಮೋಹನ ಆಳ್ವ ಹೇಳಿದರು.
ಆಳ್ವಾಸ್ ಫೌಂಡೇಶನ್ ನ ಟ್ರಸ್ಟಿ ವಿವೇಕ ಆಳ್ವ, ರಂಗ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಸಂಪನ್ಮೂಲ ವ್ಯಕ್ತಿ ರಂಗ ನಿರ್ದೇಶಕಿ ಗಿರಿಜಾ ಸಿದ್ದಿ, ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಯೋಗೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉದ್ಘಾಟನಾ ಸಂದರ್ಭದಲ್ಲಿ ರಿಷಿಕಾ ಕುಂದೇಶ್ವರ ಹರಿಕಥೆ, ಉದ್ಘಾಟನಾ ರಂಗಗೀತೆ ಹಾಗೂ ವೈದೇ ಹಿಯವರ ನಾಯಿಮರಿ ನಾಟಕದ ತುಣುಕು ಪ್ರದರ್ಶಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು