2:35 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಡ್ರೈವಿಂಗ್ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತಕ್ಕೆ ಬಲಿ: ಕೆಎಸ್ಸಾರ್ಟಿಸಿ ಬಸ್ ಪಲ್ಟಿ 14 ಮಂದಿಗೆ ಗಾಯ

25/10/2022, 18:26

ರಾಯಚೂರು(reporterkarnataka.com):ಡ್ರೈವಿಂಗ್ ಮಾಡುತ್ತಿರುವಾಗಲೇ ಕೆಎಸ್ಸಾರ್ಟಿಸಿ ಬಸ್ ಚಾಲಕರೊಬ್ಬರು ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದು, ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಚಿಕ್ಕಹೆಸರೂರು ಎಂಬಲ್ಲಿ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಚಾಲಕ ರಾಯಚೂರು ವಿಭಾಗದ ಲಿಂಗಸೂಗುರ ಘಟಕದ ಚಾಲಕ ಶ್ರೀನಿವಾಸ್ ನಾರಾಯಣ ಗೌಡ (52) ಮೃತಪಟ್ಟ ಚಾಲಕರು.

ಸೋಮವಾರ ಸಂಜೆ ಬಸ್‌ ರಾಯಚೂರು-ಲಿಂಗಸೂಗುರ ಮಾರ್ಗವಾಗಿ ಬೆಳಗಾವಿಗೆ ಸಂಚರಿಸುತ್ತಿದ್ದ ವೇಳೆ ಮಾರ್ಗಮಧ್ಯದಲ್ಲಿ ಚಾಲಕನಿಗೆ ಹೃದಯಾಘಾತವಾಗಿದೆ. ಚಾಲಕ ಅಸ್ವಸ್ಥಗೊಂಡ ಕಾರಣ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.ಅಪಘಾತದಲ್ಲಿ ನಿರ್ವಾಹಕ ಸೇರಿದಂತೆ 14 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇವರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಲಿಂಗಸೂಗೂರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 31 ಮಂದಿ ಪ್ರಯಾಣಿಕರನ್ನು ಹೊತ್ತು ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿ ಕಡೆ ಸಂಚರಿಸುತ್ತಿತ್ತು. ಇದಕ್ಕಿದ್ದಂತೆ ಬಸ್ ಚಾಲಕನಿಗೆ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಬಳಲಿದ ಚಾಲಕ ಬಸ್ ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲೇ ಚಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಪರಿಣಾಮ ಬಸ್ ಅಪಘಾತಕ್ಕೀಡಾಗಿದೆ. ಬಸ್ ರಾಯಚೂರಿನಿಂದ ಸುಮಾರು 90 ಕಿಲೋಮೀಟರ್ ದೂರ ಪ್ರಯಾಣಿಸಿದೆ. ಈ ವೇಳೆ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು