1:58 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಡ್ರೈವಿಂಗ್ ನಲ್ಲಿ ಪ್ರಸಿದ್ಧರಾದ ನಿವೃತ್ತ ಸೈನಿಕ, ಶತಾಯುಷಿ ಮಂಗಳೂರಿನ ಮೈಕಲ್ ಡಿಸೋಜ ಇನ್ನಿಲ್ಲ

11/09/2022, 10:42

ಮಂಗಳೂರು(reporterkarnataka.com):ಡ್ರೈವಿಂಗ್ ನಲ್ಲಿ ಎತ್ತಿದ ಕೈಗೆ ಪ್ರಸಿದ್ಧರಾದ ನಿವೃತ್ತ ಸೈನಿಕ, ಶತಾಯುಷಿ ಮಂಗಳೂರಿನ ಮೈಕಲ್ ಡಿಸೋಜ (108)  ಅವರು ನಿಧನರಾಗಿದ್ದಾರೆ.

ಭಾರತೀಯ ಸೇನೆಯಲ್ಲಿ ಮೆಕ್ಯಾನಿಕಲ್ ಕಮ್ ಡ್ರೈವರ್ 10 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಸೈನ್ಯದಲ್ಲಿ 10 ವರ್ಷ ಸೇವೆಯ ನಂತರ ಲೋಕೋಪಯೋಗಿ ಇಲಾಖೆಗೆ ಸೇರಿ ಉಡುಪಿ ರಥಬೀದಿಯ ಕಾಂಕ್ರೀಟ್ ರಸ್ತೆ, ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಮಂಗಳೂರಿನ ಕೂಳೂರು ಸೇತುವೆ, ಮಲ್ಪೆ ಕಲ್ಮಾಡಿ ಸೇತುವೆ, ಬೈಂದೂರಿನ ಸೇತುವೆಗಳು, ಉಭಯ ಜಿಲ್ಲೆಗಳ ಅನೇಕ ಹಳೆಯ ಸೇತುವೆಗಳನ್ನು ನಿರ್ಮಿಸುವಾಗ ತಮ್ಮನ್ನು ತೊಡಗಿಸಿಕೊಂಡಿದ್ದರು.

ಅವರು ಪರ್ಕಳದಲ್ಲಿ ವಾಸ್ತವ್ಯ ಹೊಂದಿದ್ದರು.ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು.100 ವರ್ಷ ಕಳೆದರೂ ಉತ್ತಮ ದೃಷ್ಟಿ ಸಾಮರ್ಥ್ಯ
ಹೊಂದಿದ್ದರು.

2024ರ ತನಕ ಮಂಗಳೂರಿನ ಆರ್‌ ಟಿಒ ಅವರಿಗೆ ನಾಲ್ಕು ಚಕ್ರ ವಾಹನ ಚಾಲನೆ ಪರವಾನಗಿ ನೀಡಿತ್ತು. ಮೃತರ ಪತ್ನಿ 98ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಮೈಕಲ್ ಅವರ ತಾಯಿ ಕೂಡ 108 ವರ್ಷ ಕಾಲ ಬದುಕಿದ್ದರು. ಮಂಗಳೂರಿನ ಚರ್ಚ್‌ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು