3:50 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಡ್ರೋನ್ ದಾಳಿ: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ

02/08/2022, 10:55

ಕಾಬೂಲ್(reporterkarnataka.com):
ಅಫ್ಘಾನಿಸ್ತಾನದಲ್ಲಿ ಸಿಐಎ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ.

ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದರು.

ಅಧ್ಯಕ್ಷ ಜೋ ಬಿಡೆನ್ ಸೋಮವಾರ ಈ ಬಗ್ಗೆ ಘೋಷಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಶಂಕಿತ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಕೊಂದಿದೆ ಎಂದು ಹೇಳಿದ್ದಾರೆ.

ದೂರದರ್ಶನದ ಭಾಷಣದಲ್ಲಿ ಬಿಡೆನ್ ಅವರು, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಶನಿವಾರ ಸ್ಟ್ರೈಕ್ ನಡೆಸಲಾಯಿತು. ಯಾವುದೇ ನಾಗರಿಕ ಸಾವುನೋವುಗಳು ಸಂಭವಿಸಿಲ್ಲ. ಭಯೋತ್ಪಾದಕ ನಾಯಕ ಇನ್ನಿಲ್ಲ ಎಂದು ಹೇಳಿದರು.

ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿ ಹತ್ಯೆಯ ಕುರಿತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಘೋಷಣೆಯನ್ನು ಸೌದಿ ಅರೇಬಿಯಾ ಸ್ವಾಗತಿಸಿದೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಸ್ಟೇಟ್ ಸುದ್ದಿ ಸಂಸ್ಥೆ ಸೋಮವಾರ ತಡರಾತ್ರಿ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು