7:15 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಡ್ರಗ್ಸ್ ಪ್ರಕರಣ: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 40 ಕೇಸ್ ದಾಖಲು; 67 ಮಂದಿ ಬಂಧನ

12/07/2025, 00:02

ಮಂಗಳೂರು(reporterkarnataka.com): ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ/ಸಾಗಟ ಮಾಡುವವರ ವಿರುದ್ಧ 2025ನೇ ಸಾಲಿನಲ್ಲಿ ಇದುವರೆಗೆ 40 ಪ್ರಕರಣ ದಾಖಲಿಸಿ 67 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿವಿಧ ಆರೋಪಿಗಳಿಂದ ಆರೋಪಿಗಳಿಂದ 1.36 ಕೋಟಿ ರೂ. ಮೌಲ್ಯದ 145.324 ಕೆ.ಜಿ.ಗಾಂಜಾ, 319ಗ್ರಾಂ ಎಂಡಿಎಂಎ, 13 ಗ್ರಾಂ ಎಂ.ಡಿ.ಎಂ.ಎ ಪಿಲ್ಸ್, 756 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ ಇತರ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಲಾಗಿದೆ. ಅದೇ ರೀತಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ 2025ನೇ ಸಾಲಿನಲ್ಲಿ 335 ಪ್ರಕರಣಗಳನ್ನು ದಾಖಲಿಸಿ 376 ಮಂದಿಯನ್ನು ಬಂಧಿಸಲಾಗಿದೆ.
ನ್ಯಾಯಾಲಯದ ಅನುಮತಿ ಪಡೆದು ಮಂಗಳೂರು ನಗರ ವ್ಯಾಪ್ತಿಯ 9 ಠಾಣೆಗಳ ಒಟ್ಟು 23 ಪ್ರಕರಣಗಳಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ 21.320 ಕೆ.ಜಿ. ಗಾಂಜಾ ಮತ್ತು 60 ಗ್ರಾಂ ಎಂ.ಡಿ.ಎಂ.ಎ.ಯನ್ನು ಮೂಲ್ಕಿಯ ಕೊಲ್ನಾಡು ಕೈಗಾರಿಕ ಪ್ರದೇಶದಲ್ಲಿರುವ ರಿಸಸ್ಟೈನೆಬಿಲಿಟಿ ಹೆಲ್ತ್ ಕೇರ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಗುರುವಾರ ಬೆಳಗ್ಗೆ ನಾಶ ಪಡಿಸಲಾಗಿದೆ.
ಈ ಹಿಂದೆ ಜ.15ರಂದು ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಮಾದಕ ಸೊತ್ತುಗಳನ್ನು ನಾಶ ಮಾಡಲಾಗಿತ್ತು. ಆಗ ಒಟ್ಟು 6.80 ಕೋ.ರೂ. ಮೌಲ್ಯದ 335 ಕೆ.ಜಿ. ಗಾಂಜಾ, 7.640 ಕೆ.ಜಿ. ಎಂ.ಡಿ.ಎಂ.ಎ. ಮತ್ತು 16 ಗ್ರಾಂ.ಕೊ ಕೇನ್ ಮಾದಕ ವಸ್ತುಗಳನ್ನು ಈಗಾಗಲೇ ನಾಶ ಮಾಡಿ ವಿಲೇವಾರಿ ಮಾಡಲಾಗಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು