4:23 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಡ್ರಗ್ಸ್ ಪ್ರಕರಣ: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 40 ಕೇಸ್ ದಾಖಲು; 67 ಮಂದಿ ಬಂಧನ

12/07/2025, 00:02

ಮಂಗಳೂರು(reporterkarnataka.com): ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ/ಸಾಗಟ ಮಾಡುವವರ ವಿರುದ್ಧ 2025ನೇ ಸಾಲಿನಲ್ಲಿ ಇದುವರೆಗೆ 40 ಪ್ರಕರಣ ದಾಖಲಿಸಿ 67 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿವಿಧ ಆರೋಪಿಗಳಿಂದ ಆರೋಪಿಗಳಿಂದ 1.36 ಕೋಟಿ ರೂ. ಮೌಲ್ಯದ 145.324 ಕೆ.ಜಿ.ಗಾಂಜಾ, 319ಗ್ರಾಂ ಎಂಡಿಎಂಎ, 13 ಗ್ರಾಂ ಎಂ.ಡಿ.ಎಂ.ಎ ಪಿಲ್ಸ್, 756 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ ಇತರ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಲಾಗಿದೆ. ಅದೇ ರೀತಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ 2025ನೇ ಸಾಲಿನಲ್ಲಿ 335 ಪ್ರಕರಣಗಳನ್ನು ದಾಖಲಿಸಿ 376 ಮಂದಿಯನ್ನು ಬಂಧಿಸಲಾಗಿದೆ.
ನ್ಯಾಯಾಲಯದ ಅನುಮತಿ ಪಡೆದು ಮಂಗಳೂರು ನಗರ ವ್ಯಾಪ್ತಿಯ 9 ಠಾಣೆಗಳ ಒಟ್ಟು 23 ಪ್ರಕರಣಗಳಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ 21.320 ಕೆ.ಜಿ. ಗಾಂಜಾ ಮತ್ತು 60 ಗ್ರಾಂ ಎಂ.ಡಿ.ಎಂ.ಎ.ಯನ್ನು ಮೂಲ್ಕಿಯ ಕೊಲ್ನಾಡು ಕೈಗಾರಿಕ ಪ್ರದೇಶದಲ್ಲಿರುವ ರಿಸಸ್ಟೈನೆಬಿಲಿಟಿ ಹೆಲ್ತ್ ಕೇರ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಗುರುವಾರ ಬೆಳಗ್ಗೆ ನಾಶ ಪಡಿಸಲಾಗಿದೆ.
ಈ ಹಿಂದೆ ಜ.15ರಂದು ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಮಾದಕ ಸೊತ್ತುಗಳನ್ನು ನಾಶ ಮಾಡಲಾಗಿತ್ತು. ಆಗ ಒಟ್ಟು 6.80 ಕೋ.ರೂ. ಮೌಲ್ಯದ 335 ಕೆ.ಜಿ. ಗಾಂಜಾ, 7.640 ಕೆ.ಜಿ. ಎಂ.ಡಿ.ಎಂ.ಎ. ಮತ್ತು 16 ಗ್ರಾಂ.ಕೊ ಕೇನ್ ಮಾದಕ ವಸ್ತುಗಳನ್ನು ಈಗಾಗಲೇ ನಾಶ ಮಾಡಿ ವಿಲೇವಾರಿ ಮಾಡಲಾಗಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು