1:45 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಡ್ರಗ್ಸ್ ಪ್ರಕರಣ: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 40 ಕೇಸ್ ದಾಖಲು; 67 ಮಂದಿ ಬಂಧನ

12/07/2025, 00:02

ಮಂಗಳೂರು(reporterkarnataka.com): ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ/ಸಾಗಟ ಮಾಡುವವರ ವಿರುದ್ಧ 2025ನೇ ಸಾಲಿನಲ್ಲಿ ಇದುವರೆಗೆ 40 ಪ್ರಕರಣ ದಾಖಲಿಸಿ 67 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿವಿಧ ಆರೋಪಿಗಳಿಂದ ಆರೋಪಿಗಳಿಂದ 1.36 ಕೋಟಿ ರೂ. ಮೌಲ್ಯದ 145.324 ಕೆ.ಜಿ.ಗಾಂಜಾ, 319ಗ್ರಾಂ ಎಂಡಿಎಂಎ, 13 ಗ್ರಾಂ ಎಂ.ಡಿ.ಎಂ.ಎ ಪಿಲ್ಸ್, 756 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ ಇತರ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಲಾಗಿದೆ. ಅದೇ ರೀತಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ 2025ನೇ ಸಾಲಿನಲ್ಲಿ 335 ಪ್ರಕರಣಗಳನ್ನು ದಾಖಲಿಸಿ 376 ಮಂದಿಯನ್ನು ಬಂಧಿಸಲಾಗಿದೆ.
ನ್ಯಾಯಾಲಯದ ಅನುಮತಿ ಪಡೆದು ಮಂಗಳೂರು ನಗರ ವ್ಯಾಪ್ತಿಯ 9 ಠಾಣೆಗಳ ಒಟ್ಟು 23 ಪ್ರಕರಣಗಳಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ 21.320 ಕೆ.ಜಿ. ಗಾಂಜಾ ಮತ್ತು 60 ಗ್ರಾಂ ಎಂ.ಡಿ.ಎಂ.ಎ.ಯನ್ನು ಮೂಲ್ಕಿಯ ಕೊಲ್ನಾಡು ಕೈಗಾರಿಕ ಪ್ರದೇಶದಲ್ಲಿರುವ ರಿಸಸ್ಟೈನೆಬಿಲಿಟಿ ಹೆಲ್ತ್ ಕೇರ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಗುರುವಾರ ಬೆಳಗ್ಗೆ ನಾಶ ಪಡಿಸಲಾಗಿದೆ.
ಈ ಹಿಂದೆ ಜ.15ರಂದು ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಮಾದಕ ಸೊತ್ತುಗಳನ್ನು ನಾಶ ಮಾಡಲಾಗಿತ್ತು. ಆಗ ಒಟ್ಟು 6.80 ಕೋ.ರೂ. ಮೌಲ್ಯದ 335 ಕೆ.ಜಿ. ಗಾಂಜಾ, 7.640 ಕೆ.ಜಿ. ಎಂ.ಡಿ.ಎಂ.ಎ. ಮತ್ತು 16 ಗ್ರಾಂ.ಕೊ ಕೇನ್ ಮಾದಕ ವಸ್ತುಗಳನ್ನು ಈಗಾಗಲೇ ನಾಶ ಮಾಡಿ ವಿಲೇವಾರಿ ಮಾಡಲಾಗಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು