11:42 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್‌ ದಂಧೆ: 14 ಕೋಟಿ ಮೌಲ್ಯದ ಮಾದಕ ವಸ್ತು ವಶ: 6 ಮಂದಿ ಬಂಧನ

05/05/2026, 20:20

ಬೆಂಗಳೂರು(reporterkarnataka.com): ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಜಾಲದ ವಿರುದ್ಧ ಸಮರ ಸಾರಿರುವ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಈ ಜಾಲದಲ್ಲಿ ತೊಡಗಿದ್ದ ಕೇರಳ ಮೂಲದ ಪೆಡ್ಲರ್‌ಗಳು ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಂದಿನಿ ಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಸೌಗೇಶ್ ಮತ್ತು ಅಲ್ತಾಫ್ ಎಂಬ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 5 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ 5 ಕೆಜಿ 700 ಗ್ರಾಂ ತೂಕದ ಅತ್ಯಂತ ದುಬಾರಿ ‘ಹೈಡ್ರೋ ಗಾಂಜಾ’ವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಈ ಮಾದಕ ವಸ್ತುವನ್ನು ವಿದೇಶದಿಂದ ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಇವರ ಮೇಲೆ ಈಗಾಗಲೇ ಅಲ್ಲಿನ ವಿವಿಧ ಠಾಣೆಗಳಲ್ಲಿ ಎನ್‌ಡಿಪಿಎಸ್ (NDPS) ಪ್ರಕರಣಗಳು ದಾಖಲಾಗಿವೆ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.

*ಯಶವಂತಪುರದಲ್ಲಿ 9 ಕೋಟಿ ಮೌಲ್ಯದ ಎಂಡಿಎಂಎ ಸಹಿತ ರೌಡಿಶೀಟರ್ ಲಾಕ್:*
ಮತ್ತೊಂದೆಡೆ, ಯಶವಂತಪುರ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಸೈಯದ್ ಸುಹೇಲ್, ಮಹಮ್ಮದ್ ಸಮೀರ್, ಸಾಧಿಕ್ ಪಾಷಾ ಮತ್ತು ಮಹಮ್ಮದ್ ಹಜ್ರುಲ್ಲ ಹಕ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 9 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಎಂಡಿಎಂಎ (MDMA) ಕ್ರಿಸ್ಟಲ್‌ಗಳನ್ನು ಸೀಜ್ ಮಾಡಲಾಗಿದೆ. ಈ ಪೈಕಿ ಸೈಯದ್ ಸುಹೇಲ್ ಹೊಸಕೋಟೆಯ ಕುಖ್ಯಾತ ರೌಡಿಶೀಟರ್ ಆಗಿದ್ದು, ಈ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
ಇನ್ನು ಬಂಧಿತ ಆರೋಪಿಗಳು ನೈಜೀರಿಯಾ ಮೂಲದ ಪ್ರಜೆಗಳಿಂದ ಈ ಡ್ರಗ್ಸ್ ಖರೀದಿಸಿ ಬೆಂಗಳೂರಿನ ಸ್ಥಳೀಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಮತ್ತು ಐದು ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸದ್ಯ ಡ್ರಗ್ ಸಪ್ಲೈ ಮಾಡಿದ್ದ ನೈಜೀರಿಯಾ ಪ್ರಜೆಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು