3:01 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಾದಕ ವಸ್ತು ಮಾರಾಟ: ಬಿಹಾರದ ಇಬ್ಬರು ಆರೋಪಿಗಳ ಬಂಧನ; 1 ಕೆಜಿಗೂ ಅಧಿಕ ಗಾಂಜಾ ವಶ

02/09/2025, 22:30

ಮಂಗಳೂರು(reporterkarnataka.com): ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಹರ್ಷ ಕುಮಾರ್ ಮತ್ತು ಅಮರ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಹರ್ಷ ಕುಮಾರ್ ಎಂಬಾತನಿಂದ 1 ಕೆಜಿ 230 ಗ್ರಾಂ ಮತ್ತು ಅಮರ್ ಕುಮಾರ್ ಎಂಬಾತನಿಂದ 80 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು 75,000 ರೂ. ಆಗಿದೆ.
ಆರೋಪಿಗಳು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದಾಗ ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಜ್ಞಾನಶೇಖರರವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಕರಾದ ಶ್ರೀಕಾಂತ್ ಕೆ. ಅವರ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ಜ್ಞಾನಶೇಖರ ಅವರು ತಮ್ಮ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ನಡೆಸಿದ್ದರು.
ಆರೋಪಿಗಳ ಪೈಕಿ ಒಬ್ಬಾತನು ಬಿಹಾರದ ಪಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ ಮತ್ತು ಇನ್ನೊಬ್ಬ ದೆಹಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು