4:06 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Drugs | ಬೃಹತ್ ಡ್ರಗ್ಸ್ ಜಾಲ ಬೇಧಿಸಿದ ಮಂಗಳೂರು ಪೊಲೀಸರು: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶ್ಲಾಘನೆ

17/03/2025, 21:26

ಬೆಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಶ್ಲಾಘಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಜಾಲದ ಕಬಂಧಬಾಹುಗಳಲ್ಲಿ ಬಂಧಿಯಾಗಿದ್ದು ಜನಸಾಮಾನ್ಯರು ಆತಂಕ ಪಡುವಂತಹ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಈ ಜಾಲದ ಬೆನ್ನುಬಿದ್ದ ಪೊಲೀಸರು ಅಂದಾಜು 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದು ಆಫ್ರಿಕಾ ಮೂಲದ ಇಬ್ಬರು ಮಹಿಳೆಯರು ಮತ್ತು ಸ್ಥಳೀಯ ಯುವಕನೋರ್ವನನ್ನು ಬಂಧಿಸಿರುವುದು ಪೋಲೀಸರ ಈ ಸಾಹಸಕಾರಿ ಕಾರ್ಯಾಚರಣೆಯನ್ನು ಪ್ರತಿಯೊಬ್ಬ ನಾಗರಿಕನೂ ಕೂಡ ಪ್ರಶಂಸಿಸಬೇಕಾಗಿದೆ.
ಇದಕ್ಕಾಗಿ ರಾಜ್ಯ ಗೃಹ ಇಲಾಖೆ, ಪೊಲೀಸ್ ಇಲಾಖೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯನ್ನೂ ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮಂಗಳೂರು ಶಿಕ್ಷಣ ಕಾಶಿ ಎಂದೇ ಹೆಸರು ಪಡೆದಿದ್ದು ಇತ್ತೀಚಿನ ದಿನಗಳಲ್ಲಿ ಈ ಹೆಸರಿಗೆ ಮಸಿ ಬಳಿಯುವಂತೆ ಡ್ರಗ್ಸ್ ದಂಧೆ, ಅಕ್ರಮ ದಂಧೆಗಳು ಕಾರ್ಯಾಚರಿಸುತ್ತಿದ್ದವು. ಇದು ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಹೊರಜಿಲ್ಲೆ, ರಾಜ್ಯ, ರಾಷ್ಟ್ರಗಳಿಂದ ಬಂದು ಶಿಕ್ಷಣ ಪಡೆಯುತ್ತಿರುವ ಮಕ್ಕಳ ಪೋಷಕರ ಆತಂಕಕ್ಕೆ ಕಾರಣವಾಗಿತ್ತು. ಆದರೆ ಪೊಲೀಸ್ ಇಲಾಖೆ ಡ್ರಗ್ಸ್ ದಂಧೆಯನ್ನು ಬೇರು ಸಮೇತ ಕಿತ್ತುಹಾಕಲು ಪಣತೊಟ್ಟಿದ್ದು ಅದರಲ್ಲಿ ಯಶಸ್ಸನ್ನೂ ಕಂಡಿದೆ. ಮುಂದೆಯೂ ಪೊಲೀಸ್ ಇಲಾಖೆ ದಂಧೆಕೋರರನ್ನು ನಿಯಂತ್ರಿಸಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರಂತರ ಶ್ರಮಿಸುವ ಅಗತ್ಯವಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು