8:01 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

Drugs | ರಾಜ್ಯದ ಇತಿಹಾಸದಲ್ಲೇ ಮಂಗಳೂರು ಪೊಲೀಸರಿಂದ 75 ಕೋಟಿಗೂ ಅಧಿಕ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ವಶ: ಸಿಎಂ ಶ್ಲಾಘನೆ

16/03/2025, 19:44

ಬೆಂಗಳೂರು(reporterkarnataka.com):ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ಸಿಎಂ ಅವರು ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು