9:18 AM Sunday12 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

Drugs | ರಾಜ್ಯದ ಇತಿಹಾಸದಲ್ಲೇ ಮಂಗಳೂರು ಪೊಲೀಸರಿಂದ 75 ಕೋಟಿಗೂ ಅಧಿಕ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ವಶ: ಸಿಎಂ ಶ್ಲಾಘನೆ

16/03/2025, 19:44

ಬೆಂಗಳೂರು(reporterkarnataka.com):ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ಸಿಎಂ ಅವರು ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು