7:25 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Drugs | ರಾಜ್ಯದ ಇತಿಹಾಸದಲ್ಲೇ ಮಂಗಳೂರು ಪೊಲೀಸರಿಂದ 75 ಕೋಟಿಗೂ ಅಧಿಕ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ವಶ: ಸಿಎಂ ಶ್ಲಾಘನೆ

16/03/2025, 19:44

ಬೆಂಗಳೂರು(reporterkarnataka.com):ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ಸಿಎಂ ಅವರು ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು