10:56 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು

20/12/2023, 23:19

ಮಂಗಳೂರು(reporterkarnataka.com): ಡ್ರಗ್ಸ್ ಸೇವನೆ,ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಡ್ರಗ್ಸ್ ವ್ಯಸನಕ್ಕೆ ಸಹಾಯ ಮಾಡಿದರೂ ನೀವು ಅಪರಾಧಿಗಳಾಗಿರುತ್ತೀರಾ. ಆದ್ದರಿಂದ, ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ ಎಂದು ಎಸಿಪಿ ಗೀತಾ ಕುಲಕರ್ಣಿ ಹೇಳಿದರು.


ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕೆಪಿಟಿಯಲ್ಲಿ
ಕರ್ನಾಟಕ ರಾಜ್ಯ ಪೊಲೀಸ್, ಮಂಗಳೂರು ನಗರ ಪೊಲೀಸ್, ಮಂಗಳೂರು ಸಂಚಾರ ಉಪ ವಿಭಾಗ ಹಾಗೂ ಸಂಚಾರಿ ಪೂರ್ವ ಠಾಣೆ ವತಿಯಿಂದ ನಡೆದ ಅಪರಾಧ ಮಾಸಚರಣೆ 2023 ಮಾದಕ ದ್ರವ್ಯ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಮಾತನಾಡಿ, ನಿಮ್ಮ ಮನಸಿನಲ್ಲಿ ಯಾವುದೇ ಯಾತನೆಗಳಿದ್ದರೂ ಅದನ್ನು ನಿಮ್ಮ ತಂದೆ, ತಾಯಿ, ಶಿಕ್ಷಕರಲ್ಲಿ, ಅಥವಾ ಆತ್ಮೀಯರಲ್ಲಿ ಹಂಚಿಕೊಳ್ಳಿ, ಮಾದಕ ವ್ಯಸನಕ್ಕೆ ದಾಸರಾಗಿ,ಆತ್ಮಹತ್ಯೆಗೆ ಬಲಿಯಾಗಬೇಡಿ ಎಂದು ಕಿವಿ ಮಾತು ಹೇಳಿದರು.

ಎಲೆಕ್ಟ್ರಿಕಲ್ ಮೇಕನಿಕ್ ಉಪನ್ಯಾಸಕಿ ಸುರೇಖಾ,ಎಸ್ ಐ ವಿಜಯ್ ಮತ್ತಿರರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು