10:31 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು

20/12/2023, 23:19

ಮಂಗಳೂರು(reporterkarnataka.com): ಡ್ರಗ್ಸ್ ಸೇವನೆ,ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಡ್ರಗ್ಸ್ ವ್ಯಸನಕ್ಕೆ ಸಹಾಯ ಮಾಡಿದರೂ ನೀವು ಅಪರಾಧಿಗಳಾಗಿರುತ್ತೀರಾ. ಆದ್ದರಿಂದ, ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ ಎಂದು ಎಸಿಪಿ ಗೀತಾ ಕುಲಕರ್ಣಿ ಹೇಳಿದರು.


ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕೆಪಿಟಿಯಲ್ಲಿ
ಕರ್ನಾಟಕ ರಾಜ್ಯ ಪೊಲೀಸ್, ಮಂಗಳೂರು ನಗರ ಪೊಲೀಸ್, ಮಂಗಳೂರು ಸಂಚಾರ ಉಪ ವಿಭಾಗ ಹಾಗೂ ಸಂಚಾರಿ ಪೂರ್ವ ಠಾಣೆ ವತಿಯಿಂದ ನಡೆದ ಅಪರಾಧ ಮಾಸಚರಣೆ 2023 ಮಾದಕ ದ್ರವ್ಯ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಮಾತನಾಡಿ, ನಿಮ್ಮ ಮನಸಿನಲ್ಲಿ ಯಾವುದೇ ಯಾತನೆಗಳಿದ್ದರೂ ಅದನ್ನು ನಿಮ್ಮ ತಂದೆ, ತಾಯಿ, ಶಿಕ್ಷಕರಲ್ಲಿ, ಅಥವಾ ಆತ್ಮೀಯರಲ್ಲಿ ಹಂಚಿಕೊಳ್ಳಿ, ಮಾದಕ ವ್ಯಸನಕ್ಕೆ ದಾಸರಾಗಿ,ಆತ್ಮಹತ್ಯೆಗೆ ಬಲಿಯಾಗಬೇಡಿ ಎಂದು ಕಿವಿ ಮಾತು ಹೇಳಿದರು.

ಎಲೆಕ್ಟ್ರಿಕಲ್ ಮೇಕನಿಕ್ ಉಪನ್ಯಾಸಕಿ ಸುರೇಖಾ,ಎಸ್ ಐ ವಿಜಯ್ ಮತ್ತಿರರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು