11:36 PM Thursday8 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಕುಡಿದು ವಾಹನ ಚಾಲನೆ: ಐವರು ಚಾಲಕರಿಗೆ ಬಿತ್ತು ಫೈನ್

08/01/2026, 11:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಶೆ ಏರಿಸಿ ವಾಹನ ಚಾಲನೆ ಮಾಡಿದ ಸೋಮವಾರಪೇಟೆಯ ಮೂವರು ಚಾಲಕರು ಮತ್ತು ಶನಿವಾರಸಂತೆಯ ಇಬ್ಬರು ಚಾಲಕರು ಪೊಲೀಸರ ತಪಾಸಣೆ ಸಂದರ್ಭ ಸಿಕ್ಕಿಬಿದ್ದು ದಂಡ ಕಕ್ಕಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸಿದ ಸೋಮವಾರಪೇಟೆಯ ಪ್ರಿನ್ಸಿಪಲ್ ಸಿವಿಲ್ & JMFC ನ್ಯಾಯಾಲಯದ ನ್ಯಾಯಾಧೀಶರು ಚರಣ್ ಬಿ.ಬಿ. ಎಂಬಾತನಿಗೆ ರೂ. 7500, ಜಿ.ಇ. ಕೃಷ್ಣಪ್ಪ ಎಂಬಾತನಿಗೆ ರೂ. 8000 ಮತ್ತು ಭುವನ ಕೆ.ಎಂ. ಎಂಬುವವನಿಗೆ ರೂ. 4000 ದಂಡ ವಿಧಿಸಿದ್ದಾರೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸಿದ ಸೋಮವಾರಪೇಟೆಯ ಪ್ರಿನ್ಸಿಪಲ್ ಸಿವಿಲ್ & JMFC ನ್ಯಾಯಾಲಯದ ನ್ಯಾಯಾಧೀಶರು ಸಂದೇಶ್ ಎಂಬಾತನಿಗೆ ರೂ. 10000 ಹಾಗೂ ಸುದರ್ಶನ್ ಎಸ್. ಎಂಬಾತನಿಗೆ ರೂ. 10000 ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು