10:56 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದುಬಾರೆ: ಪ್ರವಾಸಕ್ಕಾಗಿ ಬಂದಿದ್ದ ನಾಸಿಕ್ ನ ತರುಣ ನದಿಯಲ್ಲಿ ಮುಳುಗಿ ದಾರುಣ ಸಾವು

27/04/2022, 09:09

ಕುಶಾಲನಗರ(reporterkarnataka.com): ಪ್ರವಾಸಕ್ಕಾಗಿ ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಾವೇರಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ದುಬಾರೆಯಲ್ಲಿ ಮಂಗಳವಾರ ನಡೆದಿದೆ.

ಮುಂಬೈನ ನಾಸಿಕ್’ನ ನಿವಾಸಿ ದಾದಾಜಿ ಮಹಾಜನ್ ಎಂಬವರ ಪುತ್ರ ಅನಿಕೇತ್ (17) ಎಂಬಾತ ಮೃತ ದುರ್ದೈವಿ.

ಮುಂಬೈನಿಂದ 23 ಮಂದಿ ಪ್ರವಾಸಿಗರು ದುಬಾರೆ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು. ಮಂಗಳವಾರ ನದಿಯಲ್ಲಿ ಈಜಾಡಲು ತೆರಳಿದ ಸಂದರ್ಭ ಯುವಕ ನದಿಯಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.

ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೋಟಿಂಗ್ ಚಾಲಕರ ನೆರವಿನಿಂದ ಮೃತ ದೇಹವನ್ನು ನದಿಯಿಂದ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.

ಯುವಕನ ದುರ್ಮರಣದಿಂದಾಗಿ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.ಯುವಕನ ತಂದೆ ನಾಸಿಕ್’ನಲ್ಲಿ ರೈತರಾಗಿದ್ದು, ಯುವಕ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು