7:10 PM Thursday6 - August 2026
ಬ್ರೇಕಿಂಗ್ ನ್ಯೂಸ್
ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ…

ಇತ್ತೀಚಿನ ಸುದ್ದಿ

ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತ: ಕೋಟೆಕಾರು ಬೀರಿಯ ಯುವತಿ ವಿಧಿವಶ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

23/02/2024, 20:49

ಮಂಗಳೂರು(reporterkarnataka.com): ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಸಮೋಪದ ಕೋಟೆಕಾರು ಬೀರಿಯ ಯುವತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.
ಕೋಟೆಕಾರು ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬಾಕೆ ಮೃತಪಟ್ಟ ಯುವತಿ ಎಂದು ತಿಳಿದು ಬಂದಿದೆ. ಈಕೆ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ. ಮಂಗಳೂರು ಹೊರವಲಯದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬೈಗೆ ತೆರಳಿ ಅಲ್ಲಿನ ಏರ್ ಪೋರ್ಟ್ ನಲ್ಲಿ ಅಧಿಕಾರಿಯಾಗಿ ಕಳೆದ 5 ವರುಷಗಳಿಂದ ಕಾರ್ಯ ನಿರ್ವಹಿಸಿದ್ದರು. ಪ್ರತಿದಿನ ಕಂಪೆನಿಯ ಕ್ಯಾಬ್‌ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ಕ್ಯಾಬ್ ತಪ್ಪಿದ ಹಿನ್ನೆಲೆಯಲ್ಲಿ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ 6 ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ಪೋಷಕರು ಮಗಳ ಮದುವೆಯ ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ವಿಧಿಯಾಟ ಬೇರೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು