3:13 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’

17/02/2022, 20:57

ಅಬುದಾಬಿ(reporterkarnataka.com):ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ  ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು