10:38 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು