7:14 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು