12:28 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು