3:47 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು