4:49 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದುಬೈ: ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ಪಂದ್ಯಾಟ; ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡಕ್ಕೆ ಪ್ರಶಸ್ತಿ

20/06/2023, 12:23

ಮಂಗಳೂರು(reporterkarnataka.com): ದುಬೈನ ಶಬಾಬ್ ಅಲ್ ಅಹ್ಲಿ ಕ್ರೀಡಾಂಗಣದಲ್ಲಿ, ಡಾ. ರಾಜ್ ಕಪ್ ಆರನೇ ಆವೃತ್ತಿಯ ಪೂರ್ವ ಸಿದ್ಧತಾ ಕಾರ್ಯಕ್ರಮದ ಅಂಗವಾಗಿ ನಡೆದ ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ಪಂದ್ಯಾಕೂಟವನ್ನು ರಫೀಕ್ ದರ್ಬಾರ್ ಮಾಲೀಕತ್ವದ, ವಸಿಷ್ಠ ಸಿಂಹ ನೇತೃತ್ವದ ‘ತುಳುನಾಡ ಟೈಗರ್ಸ್’ ತಂಡ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಕನ್ನಡ, ತುಳು, ತಮಿಳು, ತೆಲುಗು, ಮಲಯಾಳಂ ಸಿನಿಮಾ ಮತ್ತು ಕಿರುತೆರೆಯ 40ಕ್ಕೂ ಕಲಾವಿದರ 6 ತಂಡಗಳ ನಡುವೆ ನಡೆದ ಪಂದ್ಯಾಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಬಾಕ್ಸ್ ಕ್ರಿಕೆಟ್ ನ ಲೀಗ್ ಹಂತದ ಪಂದ್ಯಗಳಲ್ಲಿ ಗೆದ್ದ ಲೂಸ್ ಮಾದ ಯೋಗಿ ಹಾಗೂ ವಸಿಷ್ಠ ಸಿಂಹ ತಂಡಗಳು ಫೈನಲ್ ಹಂತಕ್ಕೆ ತಲುಪಿ ಪರಸ್ಪರ ಮುಖಾಮುಖಿಯಾದವು.
ಫೈನಲ್ ಪಂದ್ಯದಲ್ಲಿ ನಾಯಕ ಲೂಸ್ ಮಾದ ಯೋಗಿ ನೇತೃತ್ವ ಡಾಲಿ ಧನಂಜಯ, ಪನ್ನಾಗಭರಣ, ಸಿಂಪಲ್ ಸುನಿ ಒಳಗೊಂಡ ಸಮೃದ್ಧಿ ಬೆಂಗಳೂರು ತಂಡವನ್ನು ವಸಿಷ್ಠ ಸಿಂಹ ನೇತೃತ್ವದ ಪೃಥ್ವಿ ಅಂಬಾರ್, ಮಣಿಕಾಂತ್ ಕದ್ರಿ, ಬಿರುವೆರ್ ಕುಡ್ಲದ ಉದಯ ಪೂಜಾರಿ, ರಿಯಾಜ್, ಶಹಾಬುದ್ದೀನ್ ಎರ್ಮಾಳ್ ತಂಡವು ರೋಚಕವಾಗಿ ಸೋಲಿಸಿ ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್ 2023’ ಪ್ರಶಸ್ತಿ ಗೆದ್ದರು.

ತುಳುನಾಡ ಟೈಗರ್ಸ್ ತಂಡದ ಫೈನಲ್ ಪಂದ್ಯದ ಗೆಲುವಿನ ರೂವಾರಿ ಶಹಾಬುದ್ದೀನ್ ಎರ್ಮಾಳ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಉತ್ತಮ ಆಲ್ ರೌಂಡರ್ ಪ್ರದರ್ಶನ ನೀಡಿದ ಪೃಥ್ವಿ ಅಂಬಾರ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ತುಳುನಾಡ ಟೈಗರ್ಸ್ ತಂಡದ ಮ್ಯಾನೇಜರ್ ಇಮ್ರಾನ್ ಖಾನ್ ಎರ್ಮಾಳ್, ಪೋಷಕರಾದ ರೊನಾಲ್ಡ್ ಮಾರ್ಟಿಸ್, ಇಸ್ಮಾಯಿಲ್, ಶೆರ್ಲಿ ಅಬ್ರಹಾಂ, ಜಹೀರ್ ಬೈಕಂಪಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಯೋಜಕರಾದ ರಾಜೇಶ್ ಬ್ರಹ್ಮಾವರ, ಸೆಂಥಿಲ್, ಮಮತಾ ಸೆಂಥಿಲ್ ದುಬೈನಲ್ಲಿ ಅತ್ಯುತ್ತಮ ಗುಣಮಟ್ಟದಲ್ಲಿ ಆಯೋಜಿಸಿದ ಈ ಪಂದ್ಯಾವಳಿ ಕಲಾವಿದರ ಬಾಂಧವ್ಯ ಹಾಗೂ ಕ್ರೀಡಾ ಸ್ಫೂರ್ತಿಯ ಹಲವಾರು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು