8:15 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ದುಬೈ ಯಕ್ಷೋತ್ಸವಕ್ಕೆ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ, ಪುಟಾಣಿ ಅಗಸ್ತ್ಯ ಕುಲ್ಕುಂದ

01/06/2024, 10:10

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂನ್ 9ರಂದು ದುಬೈನಲ್ಲಿ ನಡೆಯಲಿರುವ ‘ದುಬೈ ಯಕ್ಷೋತ್ಸವ’ದಲ್ಲಿ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಭಾಗವಹಿಸಲಿದ್ದಾರೆ.
ದುಬೈ ಯಕ್ಷೋತ್ಸವ 2024ರ ದಾಶರಥಿ ದರ್ಶನ ಪ್ರಸಂಗದಲ್ಲಿ ಭವ್ಯಶ್ರೀ ಅವರು ಭಾಗವತಿಕೆ ನಡೆಸಲಿದ್ದಾರೆ. ಅವರ ಪುತ್ರ ಅಗಸ್ತ್ಯ ಕುಲ್ಕುಂದ ಚಕ್ರತಾಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದುಬೈ ಯಕ್ಷೋತ್ಸವ ಹಿನ್ನೆಲೆಯಲ್ಲಿ ಜೂ.1ರಂದು ಭವ್ಯಶ್ರೀ ಕುಲ್ಕುಂದ ಹಾಗೂ ಅಗಸ್ತ್ಯ ಕುಲ್ಕುಂದ ಅವರು ದುಬೈಗೆ ತೆರಳಲಿದ್ದಾರೆ. ಭವ್ಯಶ್ರೀ ಅವರು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಅಗಸ್ತ್ಯ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮೂರನೇ ತರಗತಿ ವಿದ್ಯಾರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು