12:21 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

22/10/2024, 23:49

ಮಂಗಳೂರು(reporterkarnataka.com):ಅಕ್ಟೋಬರ್ 13ರಂದು, ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ 50ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸುಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಪ್ರತಿಷ್ಠಿತ ಗಡಿನಾಡ ಪ್ರಶಸ್ತಿಯನ್ನು ಕುನಿಲ್ ಗ್ರೂಪ್ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರಿಗೆ ನೀಡಿ ಗೌರವಿಸಿತು.


35 ವರ್ಷಗಳ ಹಿಂದೆ ಕಾಸರಗೋಡು ಜಿಲ್ಲೆಯ ಶಿರಿಯಾ ಎಂಬ ಸಣ್ಣ ಗ್ರಾಮದಲ್ಲಿ ಡಾ। ಕುನಿಲ್ ಅವರ ಶೈಕ್ಷಣಿಕ ಯಾತ್ರೆಯು ಪ್ರಾರಂಭವಾಯಿತು. ಅಲ್ಲಿ ಅವರು ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಸಮಗ್ರ ಶಿಕ್ಷಣವನ್ನು ನೀಡುವ ಶಾಲೆಯನ್ನು ಸ್ಥಾಪಿಸಿದರು. ಸ್ಥಳೀಯ ಸಮುದಾಯದ ಸಹಕಾರದೊಂದಿಗೆ ಅವರು ಬದಿಯಡ್ಕದಲ್ಲಿ ಎರಡನೇ ಶಾಲೆಯನ್ನು ಸ್ಥಾಪಿಸಿದರು ಹಾಗೂ ಅವರ ನಿರಂತರ ಬೆಂಬಲದಿಂದ ಉತ್ತೇಜಿತರಾಗಿ, ಕರ್ನಾಟಕದ ನಾಟೆಕಲ್’ನಲ್ಲಿ ಮತ್ತು ತುಂಬೆಯಲ್ಲಿ ಕುನಿಲ್ ಶಾಲೆಗಳನ್ನು ವಿಸ್ತರಿಸಿದರು.
ನಾಲ್ಕು ಶಾಲೆಗಳು 7000 ವಿದ್ಯಾರ್ಥಿಗಳಿಗೆ ಪೋಷಕ ಭೂಮಿಯಾಗಿ ಮಾರ್ಪಟ್ಟಿವೆ. 600 ವೃತ್ತಿಪರ ಸಿಬ್ಬಂದಿ ಮತ್ತು 125 ಶಾಲಾ ವಾಹನಗಳೊಂದಿಗೆ ಈ ಶಾಲೆಗಳು ಅತ್ತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. 100% ಫಲಿತಾಂಶವನ್ನು ನಿರಂತರವಾಗಿ ಕುನಿಲ್ ಶಾಲೆಗಳು ಸಾಧಿಸುತ್ತಿವೆ, ಇದು ಡಾ. ಫಖ್ರುದ್ದೀನ್ ಕುನಿಲ್ ಅವರ ಶಿಕ್ಷಣದಲ್ಲಿನ ಶ್ರೇಷ್ಠತೆಯ ಬದ್ಧತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಅನುಮತಿ ದೊರೆತರೆ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರು ಬಿ.ಎ., ಬಿ.ಕಾಂ, ಬಿ.ಎಸ್ಸಿ ಮತ್ತು ಬಿ.ಬಿ.ಎ.ಯಲ್ಲಿ ಪದವಿ ಕೋರ್ಸ್‌ಗಳನ್ನು ಪರಿಚಯಿಸಲು ಯೋಜನೆಯನ್ನು ರೂಪಿಸಿದ್ದಾರೆ. ಇದರಿಂದಾಗಿ ಶೈಕ್ಷಣಿಕ ಅವಕಾಶಗಳನ್ನು ಇನ್ನಷ್ಟು ಸಮೃದ್ಧಗೊಳಿಸಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಕುನಿಲ್ ಗ್ರೂಪ್ ಅಧ್ಯಕ್ಷ ಡಾ। ಫಖ್ರುದ್ದೀನ್ ಕುನಿಲ್, ಕುನಿಲ್ ಗ್ರೂಪ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ರಾಜ್ ಪ್ರಸಾದ್ ನಾಯ್ಕ್, ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು