9:29 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ದುರಂತ ನಡೆದು 4 ದಿನಗಳ ಬಳಿಕ ಶಾಸಕರ ಭೇಟಿ !: ನಾಲ್ವರು ಸಹೋದರರ ಚಿತೆಯ ಬೆಂಕಿ ಆರಿದ ಬಳಿಕ ಆಗಮಿಸಿದ ಕುಮಟಳ್ಳಿ!!

01/07/2021, 15:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ವರು ಸಹೋದರರ ಅಂತ್ಯಸಂಸ್ಕಾರ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಇಲ್ಲಿನ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.


ದುರ್ಘಟನೆ ನಡೆದು ಸುಮಾರು 4 ದಿನಗಳ ಬಳಿಕ ಶಾಸಕರು ಭೇಟಿ ನೀಡಿರುವ ಕುರಿತು ಗ್ರಾಮಸ್ಥರು ‘ರಿಪೋರ್ಟರ್ ಕರ್ನಾಟಕ’ ಜತೆ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ಟೈಮ್ ಮಾಡಿಕೊಂಡು ಬಂದು ಮತ ಕೇಳುವ ಶಾಸಕರಿಗೆ ಗೆದ್ದ ಬಳಿಕ ಅವರ ಕ್ಷೇತ್ರದಲ್ಲಿ ಬಲು ದೊಡ್ಡ ದುರ್ಘಟನೆಯೇ ನಡೆದರೂ ಇಲ್ಲಿಗೆ ಭೇಟಿ ನೀಡಲು  ಸಮಯಾವಕಾಶವಿಲ್ಲ. ಮೃತರ ಅಂತ್ಯಕ್ರಿಯೆ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಅವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಎಂದು ಹಲ್ಯಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಗುರುವಾರ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಶೀಘ್ರವೇ ಪರಿಹಾರ ಘೋಷಿಸುವ ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಕುಮಟಳ್ಳಿ, ಮುಖ್ಯಮಂತ್ರಿಗಳ ವಿಪತ್ತು ನಿಧಿ ಯಾವುದಾದರೂ ಯೋಜನೆಯಲ್ಲಿ ಮೃತರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನು ಆದಷ್ಟು ಬೇಗ ಕೊಡಿಸಲಾಗುವುದು. 

ಪುತ್ರ ವಿಯೋಗ ಬಹಳ ಕೆಟ್ಟದ್ದು. ದೇವರು ಆ ಕುಟುಂಬದವರಿಗೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ. ಈ ದುರಂತದಲ್ಲಿ ಶವ ಹೊರತೆಗೆಯಲು ಡಿಸಿ, ಎಸಿ, ಡಿವೈಎಸ್ ಪಿ, ಸಿಪಿಐ, ತಹಶಿಲ್ದಾರ, ಸಾರ್ವಜನಿಕರು, ಎನ್ ಡಿ ಆರ್ ಎಫ್ ಸೇರಿದಂತೆ ಹಲವರು ಸೇರಿ ಅವಿರತವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕುಮಾರ್. ಡಿವೈಎಸ್ಪಿ  ಎಸ್ .ವಿ. ಗಿರೀಶ್.  ಸಿಪಿಐ ಶಂಕರಗೌಡ ಬಸನಗೌಡ, ಯಲ್ಲಾಲಿಂಗ ಪಾಟೀಲ್, ಸುರೇಶ ವಾಡೇದ, ಬಾಳಪ್ಪ ಬಾಗಿ, ಅಜಿತ್ ಸಿಂದೆ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದ ನಾಲ್ವರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು