9:22 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ದುರಂತ ನಡೆದು 4 ದಿನಗಳ ಬಳಿಕ ಶಾಸಕರ ಭೇಟಿ !: ನಾಲ್ವರು ಸಹೋದರರ ಚಿತೆಯ ಬೆಂಕಿ ಆರಿದ ಬಳಿಕ ಆಗಮಿಸಿದ ಕುಮಟಳ್ಳಿ!!

01/07/2021, 15:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ವರು ಸಹೋದರರ ಅಂತ್ಯಸಂಸ್ಕಾರ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಇಲ್ಲಿನ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.


ದುರ್ಘಟನೆ ನಡೆದು ಸುಮಾರು 4 ದಿನಗಳ ಬಳಿಕ ಶಾಸಕರು ಭೇಟಿ ನೀಡಿರುವ ಕುರಿತು ಗ್ರಾಮಸ್ಥರು ‘ರಿಪೋರ್ಟರ್ ಕರ್ನಾಟಕ’ ಜತೆ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ಟೈಮ್ ಮಾಡಿಕೊಂಡು ಬಂದು ಮತ ಕೇಳುವ ಶಾಸಕರಿಗೆ ಗೆದ್ದ ಬಳಿಕ ಅವರ ಕ್ಷೇತ್ರದಲ್ಲಿ ಬಲು ದೊಡ್ಡ ದುರ್ಘಟನೆಯೇ ನಡೆದರೂ ಇಲ್ಲಿಗೆ ಭೇಟಿ ನೀಡಲು  ಸಮಯಾವಕಾಶವಿಲ್ಲ. ಮೃತರ ಅಂತ್ಯಕ್ರಿಯೆ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಅವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಎಂದು ಹಲ್ಯಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಗುರುವಾರ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಶೀಘ್ರವೇ ಪರಿಹಾರ ಘೋಷಿಸುವ ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಕುಮಟಳ್ಳಿ, ಮುಖ್ಯಮಂತ್ರಿಗಳ ವಿಪತ್ತು ನಿಧಿ ಯಾವುದಾದರೂ ಯೋಜನೆಯಲ್ಲಿ ಮೃತರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನು ಆದಷ್ಟು ಬೇಗ ಕೊಡಿಸಲಾಗುವುದು. 

ಪುತ್ರ ವಿಯೋಗ ಬಹಳ ಕೆಟ್ಟದ್ದು. ದೇವರು ಆ ಕುಟುಂಬದವರಿಗೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ. ಈ ದುರಂತದಲ್ಲಿ ಶವ ಹೊರತೆಗೆಯಲು ಡಿಸಿ, ಎಸಿ, ಡಿವೈಎಸ್ ಪಿ, ಸಿಪಿಐ, ತಹಶಿಲ್ದಾರ, ಸಾರ್ವಜನಿಕರು, ಎನ್ ಡಿ ಆರ್ ಎಫ್ ಸೇರಿದಂತೆ ಹಲವರು ಸೇರಿ ಅವಿರತವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕುಮಾರ್. ಡಿವೈಎಸ್ಪಿ  ಎಸ್ .ವಿ. ಗಿರೀಶ್.  ಸಿಪಿಐ ಶಂಕರಗೌಡ ಬಸನಗೌಡ, ಯಲ್ಲಾಲಿಂಗ ಪಾಟೀಲ್, ಸುರೇಶ ವಾಡೇದ, ಬಾಳಪ್ಪ ಬಾಗಿ, ಅಜಿತ್ ಸಿಂದೆ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದ ನಾಲ್ವರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು