7:55 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ದುರಂತ ನಡೆದು 4 ದಿನಗಳ ಬಳಿಕ ಶಾಸಕರ ಭೇಟಿ !: ನಾಲ್ವರು ಸಹೋದರರ ಚಿತೆಯ ಬೆಂಕಿ ಆರಿದ ಬಳಿಕ ಆಗಮಿಸಿದ ಕುಮಟಳ್ಳಿ!!

01/07/2021, 15:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ವರು ಸಹೋದರರ ಅಂತ್ಯಸಂಸ್ಕಾರ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಇಲ್ಲಿನ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.


ದುರ್ಘಟನೆ ನಡೆದು ಸುಮಾರು 4 ದಿನಗಳ ಬಳಿಕ ಶಾಸಕರು ಭೇಟಿ ನೀಡಿರುವ ಕುರಿತು ಗ್ರಾಮಸ್ಥರು ‘ರಿಪೋರ್ಟರ್ ಕರ್ನಾಟಕ’ ಜತೆ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ಟೈಮ್ ಮಾಡಿಕೊಂಡು ಬಂದು ಮತ ಕೇಳುವ ಶಾಸಕರಿಗೆ ಗೆದ್ದ ಬಳಿಕ ಅವರ ಕ್ಷೇತ್ರದಲ್ಲಿ ಬಲು ದೊಡ್ಡ ದುರ್ಘಟನೆಯೇ ನಡೆದರೂ ಇಲ್ಲಿಗೆ ಭೇಟಿ ನೀಡಲು  ಸಮಯಾವಕಾಶವಿಲ್ಲ. ಮೃತರ ಅಂತ್ಯಕ್ರಿಯೆ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಅವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಎಂದು ಹಲ್ಯಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಗುರುವಾರ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಶೀಘ್ರವೇ ಪರಿಹಾರ ಘೋಷಿಸುವ ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಕುಮಟಳ್ಳಿ, ಮುಖ್ಯಮಂತ್ರಿಗಳ ವಿಪತ್ತು ನಿಧಿ ಯಾವುದಾದರೂ ಯೋಜನೆಯಲ್ಲಿ ಮೃತರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನು ಆದಷ್ಟು ಬೇಗ ಕೊಡಿಸಲಾಗುವುದು. 

ಪುತ್ರ ವಿಯೋಗ ಬಹಳ ಕೆಟ್ಟದ್ದು. ದೇವರು ಆ ಕುಟುಂಬದವರಿಗೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ. ಈ ದುರಂತದಲ್ಲಿ ಶವ ಹೊರತೆಗೆಯಲು ಡಿಸಿ, ಎಸಿ, ಡಿವೈಎಸ್ ಪಿ, ಸಿಪಿಐ, ತಹಶಿಲ್ದಾರ, ಸಾರ್ವಜನಿಕರು, ಎನ್ ಡಿ ಆರ್ ಎಫ್ ಸೇರಿದಂತೆ ಹಲವರು ಸೇರಿ ಅವಿರತವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕುಮಾರ್. ಡಿವೈಎಸ್ಪಿ  ಎಸ್ .ವಿ. ಗಿರೀಶ್.  ಸಿಪಿಐ ಶಂಕರಗೌಡ ಬಸನಗೌಡ, ಯಲ್ಲಾಲಿಂಗ ಪಾಟೀಲ್, ಸುರೇಶ ವಾಡೇದ, ಬಾಳಪ್ಪ ಬಾಗಿ, ಅಜಿತ್ ಸಿಂದೆ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದ ನಾಲ್ವರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು