6:21 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದುರಂತ ನಡೆದು 4 ದಿನಗಳ ಬಳಿಕ ಶಾಸಕರ ಭೇಟಿ !: ನಾಲ್ವರು ಸಹೋದರರ ಚಿತೆಯ ಬೆಂಕಿ ಆರಿದ ಬಳಿಕ ಆಗಮಿಸಿದ ಕುಮಟಳ್ಳಿ!!

01/07/2021, 15:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ವರು ಸಹೋದರರ ಅಂತ್ಯಸಂಸ್ಕಾರ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಇಲ್ಲಿನ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.


ದುರ್ಘಟನೆ ನಡೆದು ಸುಮಾರು 4 ದಿನಗಳ ಬಳಿಕ ಶಾಸಕರು ಭೇಟಿ ನೀಡಿರುವ ಕುರಿತು ಗ್ರಾಮಸ್ಥರು ‘ರಿಪೋರ್ಟರ್ ಕರ್ನಾಟಕ’ ಜತೆ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ಟೈಮ್ ಮಾಡಿಕೊಂಡು ಬಂದು ಮತ ಕೇಳುವ ಶಾಸಕರಿಗೆ ಗೆದ್ದ ಬಳಿಕ ಅವರ ಕ್ಷೇತ್ರದಲ್ಲಿ ಬಲು ದೊಡ್ಡ ದುರ್ಘಟನೆಯೇ ನಡೆದರೂ ಇಲ್ಲಿಗೆ ಭೇಟಿ ನೀಡಲು  ಸಮಯಾವಕಾಶವಿಲ್ಲ. ಮೃತರ ಅಂತ್ಯಕ್ರಿಯೆ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಅವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಎಂದು ಹಲ್ಯಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಗುರುವಾರ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಶೀಘ್ರವೇ ಪರಿಹಾರ ಘೋಷಿಸುವ ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಕುಮಟಳ್ಳಿ, ಮುಖ್ಯಮಂತ್ರಿಗಳ ವಿಪತ್ತು ನಿಧಿ ಯಾವುದಾದರೂ ಯೋಜನೆಯಲ್ಲಿ ಮೃತರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನು ಆದಷ್ಟು ಬೇಗ ಕೊಡಿಸಲಾಗುವುದು. 

ಪುತ್ರ ವಿಯೋಗ ಬಹಳ ಕೆಟ್ಟದ್ದು. ದೇವರು ಆ ಕುಟುಂಬದವರಿಗೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ. ಈ ದುರಂತದಲ್ಲಿ ಶವ ಹೊರತೆಗೆಯಲು ಡಿಸಿ, ಎಸಿ, ಡಿವೈಎಸ್ ಪಿ, ಸಿಪಿಐ, ತಹಶಿಲ್ದಾರ, ಸಾರ್ವಜನಿಕರು, ಎನ್ ಡಿ ಆರ್ ಎಫ್ ಸೇರಿದಂತೆ ಹಲವರು ಸೇರಿ ಅವಿರತವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕುಮಾರ್. ಡಿವೈಎಸ್ಪಿ  ಎಸ್ .ವಿ. ಗಿರೀಶ್.  ಸಿಪಿಐ ಶಂಕರಗೌಡ ಬಸನಗೌಡ, ಯಲ್ಲಾಲಿಂಗ ಪಾಟೀಲ್, ಸುರೇಶ ವಾಡೇದ, ಬಾಳಪ್ಪ ಬಾಗಿ, ಅಜಿತ್ ಸಿಂದೆ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದ ನಾಲ್ವರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು