9:37 PM Sunday9 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ದುರ್ಗಾಂಭ ದೇವಿಯ ತಾಳಿ ಕಳ್ಳತನ: 4 ದಿನದ ಬಳಿಕ ತಾಳಿ ಜತೆ ತಪ್ಪುಕಾಣಿಕೆ ಸಲ್ಲಿಸಿ ಕಳ್ಳರು!!

03/05/2022, 21:16

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ದೇವಿಯ ಮೂರ್ತಿಯಲ್ಲಿರುವ ತಾಳಿಯನ್ನು ಕದ್ದ ಕಳ್ಳರು 4 ದಿನಗಳ ಬಳಿಕ ಅದನ್ನು ವಾಪಸ್ ತಂದು 100 ರೂ. ತಪ್ಪು ಕಾಣಿಕೆ ಹಾಕಿದ ಘಟನೆ ನಂಜನಗೂಡು ತಾಲೂಕಿನ ಉಪ್ಪಿನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಉಪ್ಪಿನಹಳ್ಳಿ ಗ್ರಾಮದ ದುರ್ಗಾಂಭ ದೇವಸ್ಥಾನದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಕಳೆದ ವಾರವಷ್ಟೇ ದೇವಸ್ಥಾನದಲ್ಲಿ ಹುಂಡಿ ಕಳ್ಳತನವಾಗಿತ್ತು. ಹುಂಡಿ ಜೊತೆ ದೇವರ ತಾಳಿಯನ್ನು ಸಹ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸ್ ಕಂಪ್ಲೇಂಟ್ ಬಳಿಕ ನಾಲ್ಕು ದಿನ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ನಾಲ್ಕು ದಿನದ ನಂತರ ದೇವಸ್ಥಾನದ ಬಾಗಿಲು ತೆರೆದು ನೋಡಿದ ಅರ್ಚಕರಿಗೆ ಅಚ್ಚರಿ ಖಾದಿತ್ತು. ಕದ್ದಿದ್ದ ತಾಳಿಯನ್ನ 100 ರೂ. ನೋಟಿನಲ್ಲಿ ಕಟ್ಟಿ ದೇವಸ್ಥಾನದ ಮುಂದೆ ಇಟ್ಟು ಹೋಗಿದ್ದ ಕಳ್ಳರು. ಇದು ದೇವಿಯ ಮಹಿಮೆಯೇ ಸರಿ ಎಂದು ಗ್ರಾಮಸ್ಥರು ಈ ಪವಾಡ ಸದೃಶ ಘಟನೆ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು