11:58 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ದುರ್ಗಾಂಭ ದೇವಿಯ ತಾಳಿ ಕಳ್ಳತನ: 4 ದಿನದ ಬಳಿಕ ತಾಳಿ ಜತೆ ತಪ್ಪುಕಾಣಿಕೆ ಸಲ್ಲಿಸಿ ಕಳ್ಳರು!!

03/05/2022, 21:16

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ದೇವಿಯ ಮೂರ್ತಿಯಲ್ಲಿರುವ ತಾಳಿಯನ್ನು ಕದ್ದ ಕಳ್ಳರು 4 ದಿನಗಳ ಬಳಿಕ ಅದನ್ನು ವಾಪಸ್ ತಂದು 100 ರೂ. ತಪ್ಪು ಕಾಣಿಕೆ ಹಾಕಿದ ಘಟನೆ ನಂಜನಗೂಡು ತಾಲೂಕಿನ ಉಪ್ಪಿನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಉಪ್ಪಿನಹಳ್ಳಿ ಗ್ರಾಮದ ದುರ್ಗಾಂಭ ದೇವಸ್ಥಾನದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಕಳೆದ ವಾರವಷ್ಟೇ ದೇವಸ್ಥಾನದಲ್ಲಿ ಹುಂಡಿ ಕಳ್ಳತನವಾಗಿತ್ತು. ಹುಂಡಿ ಜೊತೆ ದೇವರ ತಾಳಿಯನ್ನು ಸಹ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸ್ ಕಂಪ್ಲೇಂಟ್ ಬಳಿಕ ನಾಲ್ಕು ದಿನ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ನಾಲ್ಕು ದಿನದ ನಂತರ ದೇವಸ್ಥಾನದ ಬಾಗಿಲು ತೆರೆದು ನೋಡಿದ ಅರ್ಚಕರಿಗೆ ಅಚ್ಚರಿ ಖಾದಿತ್ತು. ಕದ್ದಿದ್ದ ತಾಳಿಯನ್ನ 100 ರೂ. ನೋಟಿನಲ್ಲಿ ಕಟ್ಟಿ ದೇವಸ್ಥಾನದ ಮುಂದೆ ಇಟ್ಟು ಹೋಗಿದ್ದ ಕಳ್ಳರು. ಇದು ದೇವಿಯ ಮಹಿಮೆಯೇ ಸರಿ ಎಂದು ಗ್ರಾಮಸ್ಥರು ಈ ಪವಾಡ ಸದೃಶ ಘಟನೆ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು