11:46 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದುರ್ಗಾಂಭ ದೇವಿಯ ತಾಳಿ ಕಳ್ಳತನ: 4 ದಿನದ ಬಳಿಕ ತಾಳಿ ಜತೆ ತಪ್ಪುಕಾಣಿಕೆ ಸಲ್ಲಿಸಿ ಕಳ್ಳರು!!

03/05/2022, 21:16

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ದೇವಿಯ ಮೂರ್ತಿಯಲ್ಲಿರುವ ತಾಳಿಯನ್ನು ಕದ್ದ ಕಳ್ಳರು 4 ದಿನಗಳ ಬಳಿಕ ಅದನ್ನು ವಾಪಸ್ ತಂದು 100 ರೂ. ತಪ್ಪು ಕಾಣಿಕೆ ಹಾಕಿದ ಘಟನೆ ನಂಜನಗೂಡು ತಾಲೂಕಿನ ಉಪ್ಪಿನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಉಪ್ಪಿನಹಳ್ಳಿ ಗ್ರಾಮದ ದುರ್ಗಾಂಭ ದೇವಸ್ಥಾನದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಕಳೆದ ವಾರವಷ್ಟೇ ದೇವಸ್ಥಾನದಲ್ಲಿ ಹುಂಡಿ ಕಳ್ಳತನವಾಗಿತ್ತು. ಹುಂಡಿ ಜೊತೆ ದೇವರ ತಾಳಿಯನ್ನು ಸಹ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸ್ ಕಂಪ್ಲೇಂಟ್ ಬಳಿಕ ನಾಲ್ಕು ದಿನ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ನಾಲ್ಕು ದಿನದ ನಂತರ ದೇವಸ್ಥಾನದ ಬಾಗಿಲು ತೆರೆದು ನೋಡಿದ ಅರ್ಚಕರಿಗೆ ಅಚ್ಚರಿ ಖಾದಿತ್ತು. ಕದ್ದಿದ್ದ ತಾಳಿಯನ್ನ 100 ರೂ. ನೋಟಿನಲ್ಲಿ ಕಟ್ಟಿ ದೇವಸ್ಥಾನದ ಮುಂದೆ ಇಟ್ಟು ಹೋಗಿದ್ದ ಕಳ್ಳರು. ಇದು ದೇವಿಯ ಮಹಿಮೆಯೇ ಸರಿ ಎಂದು ಗ್ರಾಮಸ್ಥರು ಈ ಪವಾಡ ಸದೃಶ ಘಟನೆ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು