9:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡಿ : ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ

28/07/2021, 21:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆ ಹೊಂದಿರುವ ಯಾವುದಾದರೂ ಜನಾಂಗವಿದ್ದರೆ ಅದು ನಮ್ಮ ಮಾದಿಗ ಜನಾಂಗ. ಬಿಜೆಪಿ ಪಕ್ಷದಲ್ಲಿ ನಿಷ್ಠೆ ಹೊಂದಿದ ಪ್ರಾಮಾಣಿಕ ವ್ಯಕ್ತಿ ರಾಯಭಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಜೇಂದ್ರ ಐಹೊಳೆ ಆಗ್ರಹಿಸಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಬೆಳಗಾವಿ ಜಿಲ್ಲೆಯಲ್ಲಿ ಸತತ ಮೂರು ಬಾರಿ ರಾಯಬಾಗ ಮತಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ದುರ್ಯೋಧನ ಐಹೊಳೆ ಅವರಿಗೆ 2018 ರಲ್ಲಿ ಸಚಿವ ಸಂಪುಟದಲ್ಲಿ ಸ್ಥಾನಮಾನ ಸಿಗದೆ ವಂಚಿತರಾಗಿದ್ದು ಮತ್ತು ಇದುವರೆಗೂ ಇವರನ್ನು ಕೇವಲ ಆದಿಜಾಂಬವ ನಿಗಮದ ಅಧ್ಯಕ್ಷರನ್ನಾಗಿ ಮಾಡಿ ಮಂತ್ರಿ ಮಾಡದೆ ಇವರನ್ನು ವಂಚಿತರನ್ನಾಗಿ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಜಯ ದೂಳಗಾವಿ, ಮಹಾದೇವ ಮಾದಿ, ಸದಾಶಿವ ಮತಾಳೆ, ವಿಠ್ಠಲ ಅವಳೆ, ಪ್ರಕಾಶ ಹೆಗಣ್ಣವರ, ಬಸವರಾಜ ಹೋಳಿಕಟ್ಟಿ, ಮಹಾವೀರ ಮಾದರ, ಚನ್ನಪ್ಪಾ ಜಗದಾಳೆ, ಮಹಾವೀರ ಆಚಾರಟ್ಟಿ, ರಮೇಶ ಮಾದರ, ಲಕ್ಷ್ಮಣ ಅವಳೆ, ಆನಂದ ದೇವರಮನಿ, ಸಂಗಪ್ಪ ಮಾಯಾನಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು