8:16 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ…

ಇತ್ತೀಚಿನ ಸುದ್ದಿ

ದುಶ್ಚಟಗಳಿಂದ ದೂರವಿದ್ದರೆ ಭವಿಷ್ಯ ಉಜ್ವಲ: ಮಾಣಿ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜಯಾನಂದ ಪೆರಾಜೆ

10/11/2023, 10:07

ಬಂಟ್ವಾಳ(reporterkarnataka.com): ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ.ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಶಿಕ್ಷಕ, ಪತ್ರಕರ್ತ
ಜಯಾನಂದ ಪೆರಾಜೆ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಡಾ. ಮನೋಹರ್ ರೈ ಶುಭ ಹಾರೈಸಿದರು.

ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಸಂಚಾಲಕ ಇಬ್ರಾಹಿಂ ಕೆ.ಮಾಣಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಎಸ್. ಚೆನ್ನಪ್ಪ ಗೌಡ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ, ಶ್ಯಾಮಲ ಕೆ.,ಸುಶ್ಮಿತಾ ಉಪಸ್ಥಿತರಿದ್ದರು. ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿದರು. ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿ, ಜಯರಾಮ ಕಾಂಚನ ನಿರೂಪಿಸಿದರು.ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು