10:24 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ದುಶ್ಚಟಗಳಿಂದ ದೂರವಿದ್ದರೆ ಭವಿಷ್ಯ ಉಜ್ವಲ: ಮಾಣಿ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜಯಾನಂದ ಪೆರಾಜೆ

10/11/2023, 10:07

ಬಂಟ್ವಾಳ(reporterkarnataka.com): ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ.ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಶಿಕ್ಷಕ, ಪತ್ರಕರ್ತ
ಜಯಾನಂದ ಪೆರಾಜೆ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಡಾ. ಮನೋಹರ್ ರೈ ಶುಭ ಹಾರೈಸಿದರು.

ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಸಂಚಾಲಕ ಇಬ್ರಾಹಿಂ ಕೆ.ಮಾಣಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಎಸ್. ಚೆನ್ನಪ್ಪ ಗೌಡ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ, ಶ್ಯಾಮಲ ಕೆ.,ಸುಶ್ಮಿತಾ ಉಪಸ್ಥಿತರಿದ್ದರು. ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿದರು. ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿ, ಜಯರಾಮ ಕಾಂಚನ ನಿರೂಪಿಸಿದರು.ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು