2:28 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ದುಶ್ಚಟಗಳಿಂದ ದೂರವಿದ್ದರೆ ಭವಿಷ್ಯ ಉಜ್ವಲ: ಮಾಣಿ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜಯಾನಂದ ಪೆರಾಜೆ

10/11/2023, 10:07

ಬಂಟ್ವಾಳ(reporterkarnataka.com): ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ.ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಶಿಕ್ಷಕ, ಪತ್ರಕರ್ತ
ಜಯಾನಂದ ಪೆರಾಜೆ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಡಾ. ಮನೋಹರ್ ರೈ ಶುಭ ಹಾರೈಸಿದರು.

ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಸಂಚಾಲಕ ಇಬ್ರಾಹಿಂ ಕೆ.ಮಾಣಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಎಸ್. ಚೆನ್ನಪ್ಪ ಗೌಡ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ, ಶ್ಯಾಮಲ ಕೆ.,ಸುಶ್ಮಿತಾ ಉಪಸ್ಥಿತರಿದ್ದರು. ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿದರು. ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿ, ಜಯರಾಮ ಕಾಂಚನ ನಿರೂಪಿಸಿದರು.ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು