8:57 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಧ್ವನಿವರ್ಧಕ ಬಳಕೆ: ದೇಗುಲ, ಮಸೀದಿ, ಚರ್ಚ್ ಸೇರಿ ಮಂಗಳೂರಿನಲ್ಲಿ 1001 ಕೇಂದ್ರಗಳಿಗೆ ನೋಟೀಸ್

06/04/2022, 23:33

ಮಂಗಳೂರು(reporterkarnataka.com):  ರಾಜ್ಯ ಹೈಕೋರ್ಟ್ ನ ಆದೇಶದಂತೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಹಗಲು ಹಾಗೂ ರಾತ್ರಿ ಹೊತ್ತಿನಲ್ಲಿ ಇಂತಿಷ್ಟು ಡೆಸಿಬಲ್ ಧ್ವನಿಯನ್ನು ಮಾತ್ರ ಹೊರಡಿಸಬೇಕೆಂಬ ನಿಯಮವಿದೆ. ಈ ಕಾಯ್ದೆ, ನಿಯಮ ಈ ಹಿಂದೆಯೇ ಜಾರಿಯಲ್ಲಿದ್ದು, ಅದನ್ನು ಅನುಷ್ಠಾನ ಮಾಡುವ ಕಾರ್ಯ, ನಿಯಮ ಉಲ್ಲಂಘನೆಯ ಪರಿಶೀಲನೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು. ಈಗಾಗಲೇ ನಗರದಲ್ಲಿ 1001 ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.

ಮಸೀದಿಗಳ ಆಝಾನ್ ಸೇರಿದಂತೆ ಧ್ವನಿವರ್ಧಕ ಬಳಕೆ ಕುರಿತಂತೆ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಇದೀಗ ಮಂಗಳೂರಿನಲ್ಲಿಯೂ ನಿಯಮದಂತೆ ಧ್ವನಿವರ್ಧಕ ಬಳಕೆಗೆ ಮಂಗಳೂರು ಪೊಲೀಸರು ನೊಟೀಸು ಮೂಲಕ ಸೂಚನೆ ನೀಡುವ ಕಾರ್ಯ ಆರಂಭಿಸಿದ್ದಾರೆ.

ನಗರದಲ್ಲಿ ಈಗಾಗಲೇ ಪ್ರಮುಖ ದೇವಸ್ಥಾನ, ಮಸೀದಿ, ಚರ್ಚ್, ಶಿಕ್ಷಣ ಸಂಸ್ಥೆಗಳು, ಮನರಂಜನಾ ಸ್ಥಳಗಳಿಗೆ ನೋಟೀಸು ನೀಡುವ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನಗರದಲ್ಲಿ ಪ್ರಾಥಮಿಕ ಹಂತದಲ್ಲಿ ಧ್ವನಿವರ್ಧಕ ಬಳಸುವ 1001 ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.

ರಾಜ್ಯ ಸರಕಾರ ಹಾಗೂ ಹೈಕೋರ್ಟ್‌ನ ಆದೇಶ ಹಾಗೂ ಹಿರಿಯ ಅಧಿಕಾರಿಗಳು ನೀಡಿರುವ ಮೇರೆಗೆ ಈ ಕ್ರಮ ವಹಿಸಲಾಗಿದ್ದು, ನಗರದಲ್ಲಿ ಧ್ವನಿವರ್ಧಕ ಬಳಸುವ 357 ದೇವಸ್ಥಾನಗಳು, 168 ಮಸೀದಿಗಳು, 95 ಚರ್ಚ್‌ಗಳು, 106 ಶಿಕ್ಷಣ ಸಂಸ್ತೆಗಳು, 60 ಕೈಗಾರಿಕಾ ಸ್ಥಳಗಳು, 98 ಮನರಂಜನಾ ಸ್ಥಳಗಳು, 68 ಮದುವೆ ಹಾಲ್‌ಮತ್ತು ಕಾರ್ಯಕ್ರಮ ಸ್ಥಳಗಳು, ಇತರ 49 ಸಾರ್ವಜನಿಕ ಸ್ಥಳಗಳನ್ನು ಪ್ರಸಕ್ತ ಗುರುತಿಸಿ ಈಗಾಗಲೇ ಧ್ವನಿವರ್ಧಕ ಬಳಕೆಯ ವೇಳೆ ಶಬ್ಧ ಮಾಲಿನ್ಯಕ್ಕೆ ಅವಕಾಶವಾಗದಂತೆ ನಿಯಮ ಪಾಲನೆ ಮಾಡುವಂತೆ ನೋಟೀಸು ನೀಡುವ ಕಾರ್ಯ ಆರಂಭಿಸಲಾಗಿದೆ. ಇನ್ನಷ್ಟು ಧ್ವನಿವರ್ಧಕ ಬಳಕೆಯ ಸ್ಥಳಗಳನ್ನು ಗುರುತಿಸುವ ಪ್ರಕ್ರಿಯೆ ಮುಂದುವರಿದಿದೆ. ಪ್ರಥಮವಾಗಿ ನೋಟೀಸು ನೀಡಿ ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗುತ್ತದೆ. ಸ್ಪಂದಿಸದಿದ್ದರೆ ಮುಂದಿನ ಕಾನೂನು ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು