6:44 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ದ್ವಿಚಕ್ರ ವಾಹನ ಕಳ್ಳನ ಸೆರೆ: ನ್ಯಾಯಾಂಗ ಬಂಧನ; 1.10 ಲಕ್ಷ ರೂ. ಮೌಲ್ಯದ ಎರಡು ವಾಹನ ವಶ

23/08/2023, 21:17

ಮಂಗಳೂರು(reporterkarnataka.com):ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ತೊಕ್ಕೊಟ್ಟು ಕಾಫಿಕಾಡು ನಿವಾಸಿಯಾದ ಶನೀಝ್(23) ಬಂಧಿತ ಆರೋಪಿ. ಈತ ಕಳವು ಮಾಡಿದ ಸ್ಕೂಟರ್ ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದಾಗ, ನಗರದ ಪಂಪುವೆಲ್ ಬ್ರಿಡ್ಜ್ ಬಳಿ ಆತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ನಗರದ ಪೂರ್ವ ಪೋಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೊಂಡು, ಆರೋಪಿಯನ್ನು
ಬಂಧಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ಸ್ಕೂಟರನ್ನು ಹಾಗೂ ಈ ಹಿಂದೆ ಈತನು ಕಳವು ಮಾಡಿದ್ದ ಮತ್ತೊಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆತನಿಂದ
ಒಟ್ಟು ಸುಮಾರು 1.10 ಲಕ್ಷ ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನು ಮಂಗಳೂರು ಪೂರ್ವ ಪೊಲೀಸ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ವಶಪಡಿಸಿಕೊಂಡಿರುತ್ತಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು