1:41 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯು ಪರೀಕ್ಷೆ ರದ್ದತಿ; ರಿಪಿಟರ್ಸ್ ಮತ್ತು  ಖಾಸಗಿ ವಿದ್ಯಾರ್ಥಿಗಳ ಗೊಂದಲ ನಿವಾರಿಸಿ: ಎನ್ ಎಸ್ ಯುಐ ಆಗ್ರಹ

09/06/2021, 15:56

ಮಂಗಳೂರು(reporterkarnataka news):ರಾಜ್ಯ ಸರಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಿದ್ದು, ಅದರ ನೀತಿ-ನಿಯಮ ಗೊಂದಲ ಉಂಟು ಮಾಡಿದೆ. ಪುನಾವರ್ತನೆ ಮತ್ತು ಖಾಸಗಿಯಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಸರಕಾರ ಇನ್ನೂ ಕೂಡ ಸ್ಪಷ್ಟ ನಿಲುವನ್ನು ತಾಳದಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲ ಉಂಟು ಮಾಡಿದೆ ಎಂದು ರಾಜ್ಯ ಎನ್ ಎಸ್ ಯುಐ ಪ್ರಧಾನ ಕಾರ್ಯದರ್ಶಿ ಮನೀಶ್ ಜಿ. ರಾಜ್ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 10ನೇ ತರಗತಿಯ ಪರೀಕ್ಷೆ ವಿಷಯದಲ್ಲಿ ಯೂ ಸರ್ಕಾರ ಅನೇಕ ಗೊಂದಲಕಾರಿ ನಿಲುವುಗಳನ್ನು ಕೈಗೊಳ್ಳುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಕತ್ತಲಲ್ಲಿದೆ. ಆದಷ್ಟು ಶೀಘ್ರದಲ್ಲಿ ಈ ಎರಡು ವಿಚಾರದಲ್ಲಿ  ಸರ್ಕಾರ ಕೂಡಲೇ ಸರಿಯಾದ ನಿಲುಗಳನ್ನು ಕೈಗೊಂಡು ವಿದ್ಯಾರ್ಥಿಗಳನ್ನು ಉಳಿಸಬೇಕು ಎಂದು ಆಗ್ರಹಿಸಿದರು.

ಕಳೆದ ಒಂದು ವರ್ಷಗಳಿಂದ ಯಾವುದೇ ವರ್ಗದ ವಿದ್ಯಾರ್ಥಿ ವೇತನವನ್ನು ನೀಡಲಾಗಿಲ್ಲ. ವಿದ್ಯಾರ್ಥಿ ವೇತನವನ್ನೇ ಆಧರಿಸಿ ಶಿಕ್ಷಣ ಮುಂದುವರಿಸಿರುವ ಲಕ್ಷಾಂತರ ವಿದ್ಯಾರ್ಥಿಗಳು ಇದರಿಂದ ಕಂಗಾಲಾಗಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಕಾಲೇಜು ಶುಲ್ಕವನ್ನು ಪಾವತಿಸುವಂತೆ ಒತ್ತಡವನ್ನು ಹೇರುತ್ತಿದ್ದಾರೆ. ಆನ್ ಲೈನ್ ತರಗತಿಯ ಲಿಂಕ್ ಗಳನ್ನು ಕೂಡ ನೀಡಲಾಗುತ್ತಿಲ್ಲ. ಸರ್ಕಾರ 2 ವರ್ಷದ  ವಿದ್ಯಾರ್ಥಿ ವೇತನವನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.

ದ.ಕ.ಜಿಲ್ಲಾ ಎನ್ ಎಸ್ ಯುಐ ಅಧ್ಯಕ್ಷ ಸವಾದ್ ಸುಳ್ಯ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳ ಕಳೆದ ಸೆಮಿಸ್ಟರ್ ನ ಪರೀಕ್ಷೆಗಳನ್ನು ನಡೆಸದೆ ಮುಂದಿನ ಸೆಮಿಸ್ಟರ್ ನ ತರಗತಿಗಳನ್ನು ಆನ್ ಲೈನ್ ಮುಖಾಂತರ ಪ್ರಾರಂಭಿಸಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಓರ್ವ ವಿದ್ಯಾರ್ಥಿ ಎರಡೂ ಸೆಮಿಸ್ಟರ್ಗಳ ಪರೀಕ್ಷೆಯನ್ನ ಒಂದೇ ಸಮಯದಲ್ಲಿ ಬರೆಯುವಂತಾಗಿದ್ದು, ಕಳೆದ ಪದವಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಬೇಕು.

ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವ್ಯಾಕ್ಸಿನೇಷನ್ ಕಾಲೇಜು ಮಟ್ಟದಲ್ಲಿ ನೀಡಬೇಕಾಗಿ ಒತ್ತಾಯಿಸಿದರು.

ಎನ್ ಎಸ್ ಯುಐ ವಿಟಿಯು ಉಸ್ತುವಾರಿ ಅನ್ವೀತ್ ಕಟೀಲ್, ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಅಫೀದ್, ಜಿಲ್ಲಾ ಉಪಾಧ್ಯಕ್ಷ ನಿಖಿಲ್ ಪೂಜಾರಿ, ವರುಣ್ ಕುಮಾರ್, ಶಫೀಕ್, ಅಬ್ದುಲ್ ರಾಝೀ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು