5:14 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಡಿವೈಎಫ್ ಐ ರಾಜ್ಯ ಸಮ್ಮೇಳನ: ‘ಸಾಂಗತ್ಯ 2024’ ಕ್ರೀಡಾಕೂಟ ಸಮಾರೋಪ

05/02/2024, 21:32

ಮಂಗಳೂರು(reporterkarnataka.com): ಡಿವೈಎಫ್ ಐ ರಾಜ್ಯ ಸಮ್ಮೇಳನದ ಭಾಗವಾಗಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿಯಿಂದ ಆಯೋಜಿಸಲ್ಪಟ್ಟ ಸಾಂಗತ್ಯ 2024 ಕ್ರೀಡಾಕೂಟ ಸಮಾರೋಪಗೊಂಡಿತು.


ಕ್ರೀಡಾಕೂಟದ ಉದ್ಘಾಟನೆಯನ್ನು ರಾಷ್ಟ್ರೀಯ ವೈಟ್ಲಿಫ್ಟರ್ ನಿಶೆಲ್ ಡೆಲ್ಫಿನ್ ಡಿಸೋಜ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ತಾಲೂಕು ಅಧ್ಯಕ್ಷ ರಝಾಕ್ ಮೊಂಟೆಪದವು, ಟ್ವೈಕೊಂಡೊ ಪಟು ಆಸಿಫ್ ಕಿನ್ಯ,ರಾಷ್ಟ್ರೀಯ ಕಬಡ್ಡಿ ಆಟಗಾರ ಗೋಪಿನಾಥ್ ಕಾಪಿಕಾಡ್, ಉಳ್ಳಾಲ ತಾಲೂಕು ಮಟ್ಟದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ರಾಮಚಂದ್ರ ಬಬ್ಬುಕಟ್ಟೆ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ರಫ್ ಹರೇಕಳ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಸಾಧನೆಗೈದವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಉಳ್ಳಾಲ ತಾಲೂಕಿನ ಸುಮಾರು 15 ಘಟಕಗಳು ಕ್ರೀಡೆಯಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದಲ್ಲಿ ಯುವಕರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ,ಗೋಣಿಚೀಲ ಓಟ, ಗುಂಡೆಸೆತ ಮತ್ತು ಯುವತಿಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ, ಮಡಕೆ ಹೊಡೆಯುವುದು, ಸೂಪರ್ ಮಿನಿಟ್ ಹಾಗೂ ಶಾಲಾ ಮಟ್ಟದಲ್ಲಿ 3 ವಿಧದ ಪಂದ್ಯಗಳಿದ್ದವು. ಕುತ್ತಾರು ಬಟ್ಟೆದಡಿ ಘಟಕವು ಬರೋಬ್ಬರಿ 97 ಅಂಕ ಪಡೆದು ಚಾಂಪಿಯನ್ ಪಟ್ಟಕ್ಕೇರಿತು. ಅಭಿನಂದನೆಗಳು. ಕೊನೆಯಲ್ಲಿ ಸಮಾರೋಪ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ರಾಷ್ಟ್ರೀಯ ವಾಲಿಬಾಲ್ ಆಟಗಾರ ಪ್ರವೀಣ್ ಕುಮಾರ್, ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಕುಮಾರ್ ಬಜಾಲ್, ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್, ಸುಕುಮಾರ್ ತೊಕ್ಕೊಟ್ಟು, ರಮೇಶ್ ಉಳ್ಳಾಲ್ , ರಾಮಚಂದ್ರ ಬಬ್ಬುಕಟ್ಟೆ,ಜನಾರ್ದನ ಕುತ್ತಾರ್ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಘಟಕಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು