6:02 AM Monday13 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಡಿವೈಎಫ್ ಐ ರಾಜ್ಯ ಸಮ್ಮೇಳನ: ‘ಸಾಂಗತ್ಯ 2024’ ಕ್ರೀಡಾಕೂಟ ಸಮಾರೋಪ

05/02/2024, 21:32

ಮಂಗಳೂರು(reporterkarnataka.com): ಡಿವೈಎಫ್ ಐ ರಾಜ್ಯ ಸಮ್ಮೇಳನದ ಭಾಗವಾಗಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿಯಿಂದ ಆಯೋಜಿಸಲ್ಪಟ್ಟ ಸಾಂಗತ್ಯ 2024 ಕ್ರೀಡಾಕೂಟ ಸಮಾರೋಪಗೊಂಡಿತು.


ಕ್ರೀಡಾಕೂಟದ ಉದ್ಘಾಟನೆಯನ್ನು ರಾಷ್ಟ್ರೀಯ ವೈಟ್ಲಿಫ್ಟರ್ ನಿಶೆಲ್ ಡೆಲ್ಫಿನ್ ಡಿಸೋಜ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ತಾಲೂಕು ಅಧ್ಯಕ್ಷ ರಝಾಕ್ ಮೊಂಟೆಪದವು, ಟ್ವೈಕೊಂಡೊ ಪಟು ಆಸಿಫ್ ಕಿನ್ಯ,ರಾಷ್ಟ್ರೀಯ ಕಬಡ್ಡಿ ಆಟಗಾರ ಗೋಪಿನಾಥ್ ಕಾಪಿಕಾಡ್, ಉಳ್ಳಾಲ ತಾಲೂಕು ಮಟ್ಟದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ರಾಮಚಂದ್ರ ಬಬ್ಬುಕಟ್ಟೆ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ರಫ್ ಹರೇಕಳ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಸಾಧನೆಗೈದವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಉಳ್ಳಾಲ ತಾಲೂಕಿನ ಸುಮಾರು 15 ಘಟಕಗಳು ಕ್ರೀಡೆಯಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದಲ್ಲಿ ಯುವಕರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ,ಗೋಣಿಚೀಲ ಓಟ, ಗುಂಡೆಸೆತ ಮತ್ತು ಯುವತಿಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ, ಮಡಕೆ ಹೊಡೆಯುವುದು, ಸೂಪರ್ ಮಿನಿಟ್ ಹಾಗೂ ಶಾಲಾ ಮಟ್ಟದಲ್ಲಿ 3 ವಿಧದ ಪಂದ್ಯಗಳಿದ್ದವು. ಕುತ್ತಾರು ಬಟ್ಟೆದಡಿ ಘಟಕವು ಬರೋಬ್ಬರಿ 97 ಅಂಕ ಪಡೆದು ಚಾಂಪಿಯನ್ ಪಟ್ಟಕ್ಕೇರಿತು. ಅಭಿನಂದನೆಗಳು. ಕೊನೆಯಲ್ಲಿ ಸಮಾರೋಪ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ರಾಷ್ಟ್ರೀಯ ವಾಲಿಬಾಲ್ ಆಟಗಾರ ಪ್ರವೀಣ್ ಕುಮಾರ್, ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಕುಮಾರ್ ಬಜಾಲ್, ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್, ಸುಕುಮಾರ್ ತೊಕ್ಕೊಟ್ಟು, ರಮೇಶ್ ಉಳ್ಳಾಲ್ , ರಾಮಚಂದ್ರ ಬಬ್ಬುಕಟ್ಟೆ,ಜನಾರ್ದನ ಕುತ್ತಾರ್ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಘಟಕಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು