12:15 AM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಇ ಖಾತಾ ತಂತ್ರಾಂಶ ಲೋಪ ದೋಷ ಸರಿಪಡಿಸಲು ಮೇಯರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

18/09/2022, 10:49

ಮಂಗಳೂರು(reporterkarnataka.com):ಹೊಸದಾಗಿ ಇ ಖಾತಾ ತಂತ್ರಾಂಶವನ್ನು ಅನುಷ್ಠಾನ ಮಾಡುವ‌ ಸಂದರ್ಭದಲ್ಲಿ ಕೆಲವೊಂದು ಲೋಪ ದೋಷಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸುವ ದೃಷ್ಟಿಯಿಂದ ಮೇಯರ್
ಜಯಾನಂದ್ ಅಂಚನ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ತಂತ್ರಾಂಶ ಅಭಿವೃದ್ಧಿ ಕಂಪನಿಯ ಪ್ರಮುಖರು, ಅಧಿಕಾರಿಗಳ ಸಭೆ ನಡೆಯಿತು. 

ಇ ಖಾತಾ ಸಂಬಂಧಿತ‌ ಎಲ್ಲ ಲೋಪದೋಷಗಳನ್ನು ಒಂದೆರಡು ದಿನಗಳಲ್ಲಿ ಸರಿಪಡಿಸಿ ಹೊಸದಾಗಿ ಅನುಷ್ಠಾನ ಮಾಡಿರುವ‌ ತಂತ್ರಾಂಶದಲ್ಲಿ ಇ ಖಾತಾವನ್ನು ನೀಡಲು ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.ಇ ಖಾತಾ ಸುಲಲಿತವಾಗಿ ನಡೆಯುವ ವರೆಗೆ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕ ಸೇವೆ ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್,ಡಾ. ವೈ. ಭರತ್ ಶೆಟ್ಟಿ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಉಪಮೇಯರ್ ಪೂರ್ಣಿಮಾ, ನಿಕಟಪೂರ್ವ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು