5:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಇ ಖಾತಾ ತಂತ್ರಾಂಶ ಲೋಪ ದೋಷ ಸರಿಪಡಿಸಲು ಮೇಯರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

18/09/2022, 10:49

ಮಂಗಳೂರು(reporterkarnataka.com):ಹೊಸದಾಗಿ ಇ ಖಾತಾ ತಂತ್ರಾಂಶವನ್ನು ಅನುಷ್ಠಾನ ಮಾಡುವ‌ ಸಂದರ್ಭದಲ್ಲಿ ಕೆಲವೊಂದು ಲೋಪ ದೋಷಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸುವ ದೃಷ್ಟಿಯಿಂದ ಮೇಯರ್
ಜಯಾನಂದ್ ಅಂಚನ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ತಂತ್ರಾಂಶ ಅಭಿವೃದ್ಧಿ ಕಂಪನಿಯ ಪ್ರಮುಖರು, ಅಧಿಕಾರಿಗಳ ಸಭೆ ನಡೆಯಿತು. 

ಇ ಖಾತಾ ಸಂಬಂಧಿತ‌ ಎಲ್ಲ ಲೋಪದೋಷಗಳನ್ನು ಒಂದೆರಡು ದಿನಗಳಲ್ಲಿ ಸರಿಪಡಿಸಿ ಹೊಸದಾಗಿ ಅನುಷ್ಠಾನ ಮಾಡಿರುವ‌ ತಂತ್ರಾಂಶದಲ್ಲಿ ಇ ಖಾತಾವನ್ನು ನೀಡಲು ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.ಇ ಖಾತಾ ಸುಲಲಿತವಾಗಿ ನಡೆಯುವ ವರೆಗೆ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕ ಸೇವೆ ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್,ಡಾ. ವೈ. ಭರತ್ ಶೆಟ್ಟಿ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಉಪಮೇಯರ್ ಪೂರ್ಣಿಮಾ, ನಿಕಟಪೂರ್ವ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು