4:40 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಇ ಖಾತಾ ತಂತ್ರಾಂಶ ಲೋಪ ದೋಷ ಸರಿಪಡಿಸಲು ಮೇಯರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

18/09/2022, 10:49

ಮಂಗಳೂರು(reporterkarnataka.com):ಹೊಸದಾಗಿ ಇ ಖಾತಾ ತಂತ್ರಾಂಶವನ್ನು ಅನುಷ್ಠಾನ ಮಾಡುವ‌ ಸಂದರ್ಭದಲ್ಲಿ ಕೆಲವೊಂದು ಲೋಪ ದೋಷಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸುವ ದೃಷ್ಟಿಯಿಂದ ಮೇಯರ್
ಜಯಾನಂದ್ ಅಂಚನ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ತಂತ್ರಾಂಶ ಅಭಿವೃದ್ಧಿ ಕಂಪನಿಯ ಪ್ರಮುಖರು, ಅಧಿಕಾರಿಗಳ ಸಭೆ ನಡೆಯಿತು. 

ಇ ಖಾತಾ ಸಂಬಂಧಿತ‌ ಎಲ್ಲ ಲೋಪದೋಷಗಳನ್ನು ಒಂದೆರಡು ದಿನಗಳಲ್ಲಿ ಸರಿಪಡಿಸಿ ಹೊಸದಾಗಿ ಅನುಷ್ಠಾನ ಮಾಡಿರುವ‌ ತಂತ್ರಾಂಶದಲ್ಲಿ ಇ ಖಾತಾವನ್ನು ನೀಡಲು ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.ಇ ಖಾತಾ ಸುಲಲಿತವಾಗಿ ನಡೆಯುವ ವರೆಗೆ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕ ಸೇವೆ ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್,ಡಾ. ವೈ. ಭರತ್ ಶೆಟ್ಟಿ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಉಪಮೇಯರ್ ಪೂರ್ಣಿಮಾ, ನಿಕಟಪೂರ್ವ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು