9:11 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಇಬ್ಬರು ಬ್ಯಾಗ್ ನೊಂದಿಗೆ ಓಡಾಡುತ್ತಿರುವ ವೀಡಿಯೋಗೂ ಆಟೋ ಸ್ಫೋಟಕ್ಕೂ ಸಂಬಂಧವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

22/11/2022, 23:15

ಮಂಗಳೂರು(reporterkarnataka com): ಇಬ್ಬರು ವ್ಯಕ್ತಿಗಳು ಬ್ಯಾಗ್ ಹಿಡಿದು ಓಡಾಡುತ್ತಿರುವ ದೃಶ್ಯಕ್ಕೂ ನಾಗೂರಿಯಲ್ಲಿ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಡಿಯೋವೊಂದರಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್‌ನೊಂದಿಗೆ ಓಡಾಡುತ್ತಿರುವ ದೃಶ್ಯವಿದ್ದು, ಮಂಗಳೂರು ನಗರದಲ್ಲಿ ನಡೆದ ಸ್ಟೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬುದಾಗಿ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ‌ಇಬ್ಬರು ವ್ಯಕ್ತಿಗಳು ಓಡಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದನ್ನು ಸ್ಪೋಟ ಪ್ರಕರಣದ ಆರೋಪಿ ಮತ್ತು ಆತನೊಂದಿಗೆ ಇನ್ನೊಬ್ಬ ವ್ಯಕ್ತಿ ಇದ್ದ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಅಸಲಿಗೆ ಆ ವೀಡಿಯೋಗೂ, ಘಟನೆಗೂ ಯಾವುದೇ ಸಂಬಂಧವಿಲ್ಲ. ಅದು ರೈಲು ನಿಲ್ದಾಣದ ಬಳಿಯ ಸ್ಥಳವಾದ್ದರಿಂದ ಯಾರೋ ಪ್ರಯಾಣಿಕರು ಓಡಾಡುತ್ತಿರುವುದನ್ನು ಘಟನೆಯೊಂದಿಗೆ ತಳುಕು ಹಾಕಲಾಗುತ್ತಿದೆ. ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಸಾರ್ವಜನಿಕರು ಪರಿಶೀಲಿಸದ ಇಂತಹ ವೀಡಿಯೋಗಳನ್ನು ನಂಬಬಾರದು ಎಂದವರು ಮನವಿ ಮಾಡಿದ್ದಾರೆ.

ಈ ಘಟನೆ ಬಳಿಕ ಮಂಗಳೂರು ನಗರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ನಿಗಾ ಇಡಲಾಗುತ್ತಿದೆ. ಧಾರ್ಮಿಕ ಕೇಂದ್ರ, ಮಾಲ್‌ಗಳು, ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಶ್ವಾನ ದಳದಿಂದಲೂ ಪರಿಶೀಲನೆ ನಡೆಯಲಿದೆ ಎಂದವರು ತಿಳಿಸಿದರು.
ಘಟನೆಯಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗೆ ಗಂಭೀರ ಗಾಯಗಳಾಗಿರುವುದರಿಂದ ಚಿಕಿತ್ಸೆ ನಡೆಯುತ್ತಿದೆ. ಸದ್ಯ ಆತ ಮಾತನಾಡುವ ಪರಿಸ್ಥಿತಿಯಲ್ಲಿಲ್ಲದ ಕಾರಣ ಏನೂ ಮಾಹಿತಿಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಆತ ಚೇತರಿಸಿಕೊಂಡಿರುವ ಬಗ್ಗೆ ವೈದ್ಯರಿಂದ ಅಧಿಕೃತಗೊಂಡ ಬಳಿಕ ಆತನ ವಿಚಾರಣೆ ನಡೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು