5:58 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಇಚ್ಛಾಶಕ್ತಿ ಮತ್ತು ಅವಕಾಶಗಳನ್ನು ಅಳವಡಿಸಿಕೊಳ್ಳಿ: ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ವಿದ್ಯಾರ್ಥಿಗಳಿಗೆ ಕರೆ

25/09/2021, 13:33

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ  ಸಹ ಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯು ನಗರ ಕೆನರಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜರುಗಿತು. 




ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.  ಪಿ. ಎಸ್. ಯಡಪಡಿತ್ತಾಯ  ಗಿಡ ನೆಡುವ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ನಮ್ಮ ಜೀವನದಲ್ಲಿ ಇಚ್ಛಾಶಕ್ತಿ, ಸಾಮರ್ಥ್ಯ, ಹಾಗೂ ಅವಕಾಶಗಳನ್ನು ಅವಳಡಿಸಿಕೊಂಡು ನಡೆಯಿರಿ, ಯಶಸ್ಸು ನಿಮ್ಮದಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಜೀವನದ  ಮೌಲ್ಯಗಳನ್ನು ತಿಳಿಸಿಕೊಡುತ್ತದೆ. ಪಠ್ಯಕ್ರಮದ ಜೊತೆ ಸೇವೆಯನ್ನು ಮೈಗೂಡಿಸಿಕೊಳ್ಳಿ. ಸಾಂಸ್ಥಿಕ,  ಸಾಮಾಜಿಕ ಜವಾಬ್ದಾರಿಯನ್ನು ಕೆನರಾ ಕಾಲೇಜಿನ ವಿದ್ಯಾರ್ಥಿಗಳು ಹೊಂದಿರುವುದು ಹೆಮ್ಮೆಯ ವಿಷಯ ಎಂದರು. 

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯಧಿಕಾರಿ ಡಾ. ಕಿಶೋರ್ ಮಾತನಾಡಿ, ಬೇರೆಯವರ ಮುಖದಲ್ಲಿ ನಗು ತರಿಸುವುದು ಶ್ರೇಷ್ಠ ಕೆಲಸ ಹಾಗೂ ಇನ್ನೊಬ್ಬರಿಗೋಸ್ಕರ  ಬದುಕುವ  ಬದುಕು  ಅಮೂಲ್ಯ ವಾದದ್ದು ಎಂದು ಹೇಳಿದರು.


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ಅವಕಾಶಗಳನ್ನು ಬಳಸಿ ಕೊಳ್ಳಿ. ಸಮಾಜದಲ್ಲಿ ಉತ್ತಮ ವ್ಯಕ್ತ್ತಿಗಳಾಗಿ ಬಾಳಲು ರಾ.ಸೆ.ಯೋ ಉತ್ತಮ ವೇದಿಕೆ ಎಂದರು 


ಅಧ್ಯಕ್ಷತೆಯನ್ನು ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಎಂ. ರಂಗನಾಥ್ ಭಟ್ ವಹಿಸಿದ್ದರು. 


ಕೆನರಾ ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರೇಮಲತಾ ವಿ., ಕೆನರಾ ಕಾಲೇಜಿನ ರಾ.ಸೆ.ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ಕಾವ್ಯಶ್ರೀ ಕೆ. ಉಪಸ್ಥಿತರಿದ್ದರು.



ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನಪೋಯ ವಿಶ್ವವಿದ್ಯಾನಿಲಯ ಕೊಡಮಾಡುವ ಯುವ ಸೇನಾ ಪ್ರಶಸ್ತಿಯನ್ನು ಪಡೆದ ಕಾಲೇಜಿನ ವಿದ್ಯಾರ್ಥಿ  ಅಭಿನ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು