8:47 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿ ದಾರುಣ ಸಾವು

30/09/2024, 21:55

ಕಾರ್ಕಳ(reporterkarnataka.com): ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ  ಕೋಟಿಚೆನ್ನಯ್ಯರ ಬಾವಿಯ ಸಮೀಪ ಈಚರ್ ಲಾರಿ ಮತ್ತು ಬೈಕ್ ಮಧ್ಯೆ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿ ಸಾವನ್ನಪ್ಪಿದ್ದು, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸುರೇಶ್ ಅಚಾರ್ಯ  ಹಾಗೂ ಕುಟುಂಬ ಬೈಕಿನಲ್ಲಿ  ವೇಣೂರಿನಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ವೇಳೆ    ಈಚರ್  ಕ್ಯಾಂಟರ್ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಈಚರ್ ಕ್ಯಾಂಟರ್ ಲಾರಿ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಸಾಗುತಿತ್ತು. ಬೈಕಿನಲ್ಲಿದ್ದ  ಸುರೇಶ್ ಆಚಾರ್ಯ (36)ಸಮೀಕ್ಷಾ (7) ಸುಶ್ಮಿತಾ( ,5) ಸುಶಾಂತ್ (2)  ಮೃತಪಟ್ಟ ವರು. ಅಪಘಾತ ತೀವ್ರತೆಗೆ ಸ್ಥಳದಲ್ಲೇ  ಸುರೇಶ್ ಆಚಾರ್ಯ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಒಂದು ಮಗು ಆಸ್ಪತ್ರೆ ಸಾಗಿಸುವ ವೇಳೆ ಅಸು ನೀಗಿದೆ. ಕಾರನ್ನು ಓವರ್ ಟೇಕ್ ಮಾಡುವ ವೇಳೆ  ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಲಾರಿ ಹಿಂಬದಿಗೆ  ಬೈಕ್  ಡಿಕ್ಕಿ ಹೊಡೆದಿದೆ.  ಎಂದು ಸ್ಥಳೀಯರು ತಿಳಿಸಿದ್ದಾರೆ
ಸುರೇಶ್ ಅವರ ಪತ್ನಿ ಮೀನಾಕ್ಷಿ( 32) ಗಂಭೀರ
ಗಾಯಗೊಂಡಿದ್ದು,ಉಡುಪಿ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ‌
ಸುರೇಶ್ ಆಚಾರ್ಯ ನಲ್ಲೂರಿನ ನಿವಾಸಿಯಾಗಿದ್ದು   ಕಮ್ಮಾರಿಕೆ ವೃತ್ತಿ ಮಾಡುತ್ತಿದ್ದರು .ವೇಣೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ನಲ್ಲೂರು ತನ್ನ ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
*ಓವರ್ ಸ್ಪೀಡ್ ಅಪಘಾತ ಕ್ಕೆ ಕಾರಣವಾಯಿತೆ?:*
ವೇಣೂರಿನಿಂದ ಮಹಾಲಯ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ ಹಿಂದುಗಡೆಯಿಂದ  ಸಮೀಕ್ಷಾ,  ಸುಶ್ಮಿತಾ ಸುಶಾಂತ್  ಹಾಗೂ ಪತ್ನಿ ಮೀನಾಕ್ಷಿ ಜೊತೆಗೆ ಬ್ಯಾಗ್ ಅನ್ನು ಹಿಡಿದು ಕೊಂಡು  ಒಂದು ಮಗುವನ್ನು ಬೈಕಿನ ಮುಂಭಾಗದಲ್ಲಿ ಕುಳ್ಳಿರಿಸಿ ಕೊಂಡು  ಓವರ್ಸ್ಪೀಡ್ನಲ್ಲಿ ಬರುತ್ತಿದ್ದರು. ಕಾರನ್ನು ಓವರ್ ಟೇಕ್  ಮಾಡುವ ಸಂದರ್ಭದಲ್ಲಿ  ವೇಗವು ಹೆಚ್ಚಿದ್ದು ಎದುರಿನಲ್ಲಿ ಬರುತ್ತಿದ್ದ ಕ್ಯಾಂಟರ್ ಲಾರಿಯ  ಹಿಂಬಾಗಕ್ಕೆ ಬೈಕ್ ಢಿಕ್ಕಿ ಹೊಡೆದಿದೆ.
*ಅಪಾಯಕಾರಿ ತಿರುವು:* ಪಾಜೆಗುಡ್ಡೆ ರಸ್ತೆ ಅಪಾಯಕಾರಿ ತಿರುವು ಹಾಗೂ ಇಳಿಜಾರು ಪ್ರದೇಶ ವಾಗಿದೆ.   ಕಳೆದ ಐದು ವರ್ಷಗಳಲ್ಲಿ ಹದಿನೈದಕ್ಕೂ ಹೆಚ್ಚು  ಅಪಘಾತಗಳು ಸಂಭವಿಸಿದ್ದು ಹತ್ತು  ಜನರು ಮೃತಪಟ್ಟಿದ್ದಾರೆ.ಕಳೆದ ಎರಡು ವರ್ಷಗಳಲ್ಲಿ ಕಾರ್ಕಳ  ಧರ್ಮಸ್ಥಳ ದ ಸಾಗುವ ರಾಜ್ಯ ಹೆದ್ದಾರಿ ಯ ಪಾಜೆಗುಡ್ಡೆ ಅಪಾಯಕಾರಿ  ತಿರುವನ್ನು   20 ಲಕ್ಷ ರೂಪಾಯಿ ವೆಚ್ಚದಲ್ಲಿ ಅಗಲೀಕರಣ ಗೊಳಿಸಲಾಗಿತ್ತು. ಈ ರಸ್ತೆ ಅರಣ್ಯ ಪ್ರದೇಶ ವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು